4:20 AM Thursday11 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಕೆದೂರು ರೈಲ್ವೆ ಹಳಿ ಬಳಿ ತೋಡಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ಸಾವಿನ ಕಾರಣ ಇನ್ನೂ ನಿಗೂಢ

16/07/2022, 21:51

ಕುಂದಾಪುರ(reporterkarnataka.com): ಇಲ್ಲಿಗೆ ಸಮೀಪದ ಕೆದೂರು ಗ್ರಾಮದ  ರೈಲ್ವೆ ಹಳಿಯ ಪಶ್ಚಿಮ ಬದಿಯ ನೀರಿನ ತೋಡಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ.

ಮೃತರನ್ನು ನಿತ್ಯಾನಂದ ಶೇಟ್ ಎಂದು ಗುರುತಿಸಲಾಗಿದೆ. ಕೊಂಕಣ ರೈಲ್ವೆ ಸ್ಟೇಷನ್ ಕುಂದಾಪುರದಲ್ಲಿ ರೈಲ್ವೆ ಟ್ರ್ಯಾಕ್ ಮ್ಯಾನ್ ಆಗಿ  ಕೆಲಸ ಮಾಡಿಕೊಂಡಿರುವ ಪ್ರಶಾಂತ ನಾಯಕ್ ಎಂಬವರಿಗೆ ಮೃತದೇಹ ಪತ್ತೆಯಾಗಿರುವ ಬಗ್ಗೆ ಮಾಹಿತಿ ಬಂದಿತ್ತು. ಅದರಂತೆ ಸ್ಥಳಕ್ಕೆ ಹೋಗಿ ನೋಡಿದಾಗ ವ್ಯಕ್ತಿಯೊಬ್ಬರು ತಲೆಯ ಹಿಂಬದಿಗೆ ತೀವ್ರ ಗಾಯಗೊಂಡು ಮೃತಪಟ್ಟಿರುವುದು ಕಂಡುಬಂದಿದೆ. ವ್ಯಕ್ತಿಯು ರೈಲಿನಲ್ಲಿ ಪ್ರಯಾಣಿಸುವಾಗ ಆಕಸ್ಮಿಕವಾಗಿ ಬಿದ್ದು ಅಥವಾ ಇನ್ಯಾವುದೋ ಕಾರಣದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು