8:34 AM Thursday10 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ… ಕೊಪ್ಪ ಮೊರಾರ್ಜಿ‌ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು:… ಕೊಲೆ ಪ್ರಕರಣ: ಯೆಮೆನ್‌ನಲ್ಲಿ ಮರಣ ದಂಡನೆಗೆ ಒಳಗಾಗಿರುವ ಕೇರಳದ ನರ್ಸ್ ನಿಮಿಷಾಗೆ ಜುಲೈ… ನಂಜ ಈ ಪಣಿ ಮಾಡಿತಾಮಿ ಸಾರೂ: ವಿರಾಜಪೇಟೆ ಶಾಸಕರ ಮುಂದೆ ಕೆದರಿದ ಕೂದಲಿನ,… ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ…

ಇತ್ತೀಚಿನ ಸುದ್ದಿ

ಕೆಂಜಾರು ಗೋಶಾಲೆಗೆ ಕಾಂಗ್ರೆಸ್ ಅಭ್ಯರ್ಥಿ ಭೇಟಿ: ಗೋವುಗಳ ನೋವಿಗೆ ಮರುಗಿದ ಪದ್ಮರಾಜ್ ಆರ್.

30/03/2024, 20:48

ಮಂಗಳೂರು(reporterkarnataka.com):500ಕ್ಕೂ ಅಧಿಕ ಗೋವುಗಳು… ಆಳುದ್ದದ ಹಟ್ಟಿಯಲ್ಲಿ ಸಾವಕಾಶವಾಗಿ ನಿಲ್ಲಲು ಜಾಗವೇ ಇಲ್ಲ. ಇನ್ನು, ಮೇವು ಮೇಯಲು ಜಾಗವೆಲ್ಲಿ?, ಆರೋಗ್ಯಪೂರ್ಣವಾಗಿ ದಿನ ನಿರ್ವಹಣೆಯ ಮಾತೆಲ್ಲಿ?, ತಳಿ ಅಭಿವೃದ್ಧಿ ಮಾಡಲು ಕೇಂದ್ರವೆಲ್ಲಿ…?
ಇದು ಮಂಗಳೂರಿನ ಬಜಪೆ ಕೆಂಜಾರು ಕಪಿಲಾ ಪಾರ್ಕ್ ಗೋಶಾಲೆಯ ಕಥೆ – ವ್ಯಥೆ.


ಲೋಕಸಭಾ ಚುನಾವಣೆಯ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಶುಕ್ರವಾರ ಸಂಜೆ ಕಪಿಲಾ ಪಾರ್ಕ್ ಗೋಶಾಲೆಗೆ ಭೇಟಿ ನೀಡಿದರು. ನಿಲ್ಲಲು ಜಾಗವಿಲ್ಲದೇ ಒಂದರ ತಲೆ ಇನ್ನೊಂದು ಗೋವಿನ ಮೇಲೆ ಇರುವಂತೆ ಆಹಾರ ಮೇಯುತ್ತಿದ್ದ ಸ್ಥಿತಿ ಕಂಡು ಮರುಕ ವ್ಯಕ್ತಪಡಿಸಿದರು. ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಸಂಬಂಧಪಟ್ಟ ಅಧಿಕಾರಿ ಹಾಗೂ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಒಟ್ಟು 36 ಸೆಂಟ್ಸ್ ಜಾಗದಲ್ಲಿ 500ಕ್ಕೂ ಅಧಿಕ ಗೋವುಗಳು ನಿಲ್ಲಲಾಗದೇ ಹೊರಗೋಡಿ ಬರಲು ತವಕಿಸುತ್ತಿದ್ದವು. ಹಟ್ಟಿಯ ಹೊರಗಡೆ ಎಳೆ ಕರುಗಳು ದಿಕ್ಕು ಕಾಣದೆ ನಿಂತಿದ್ದವು.
ಗೋಶಾಲೆಯ ಪ್ರಕಾಶ್ ಅವರು ಗೋಶಾಲೆಯ ದೈನವೀ ಪರಿಸ್ಥಿತಿಯನ್ನು ವಿವರಿಸಿದರು. ಹಿಂದೂ ಪ್ರತಿಪಾದಕರು ಎಂದು ಹೇಳಿಕೊಂಡವರು ಭರವಸೆ ನೀಡಿದ್ದು ಬಿಟ್ಟರೆ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಳಲು ತೋಡಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು