8:32 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಕೇರಳದಲ್ಲಿ ಮತ್ತೆ ನೋರೋ ವೈರಸ್ ಭೀತಿ:‌ ಇಬ್ಬರು ಶಾಲಾ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆ

07/06/2022, 09:33

ಕೊಚ್ಚಿ(reporterkarnataka.com): ಕೇರಳ ರಾಜ್ಯದಲ್ಲಿ ಎರಡು ನೋರೋ ವೈರಸ್ ಪ್ರಕರಣಗಳ ದೃಢಪಟ್ಟಿವೆ.

ರಾಜಧಾನಿ ತಿರುವನಂತಪುರಂನ ವಿಝಿಂಜಂನ ಇಬ್ಬರು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ಸಾಂಕ್ರಾಮಿಕದ ಸೋಂಕು ಪತ್ತೆಯಾಗಿದೆ.

ಈ ಶಾಲೆಯಲ್ಲಿ ವಿಷಪೂರಿತ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಈ ವಿದ್ಯಾರ್ಥಿಗಳಲ್ಲಿ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿತ್ತು. ಈ ಸಂಬಂಧ ಆಸ್ಪತ್ರೆಗೆ ದಾಖಲಾದ 42 ವಿದ್ಯಾರ್ಥಿಗಳ ರಕ್ತದ ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆ 42 ಮಾದರಿಗಳಲ್ಲಿ, ಎರಡು ನೋರೋವೈರಸ್‌ ಪ್ರಕರಣಗಳು ಪತ್ತೆಯಾಗಿವೆ.

ಜನರು ನೋರೋವೈರಸ್‌ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ರಾಜ್ಯದ ಆರೋಗ್ಯ ಇಲಾಖೆಯು ಪರಿಸ್ಥಿತಿಯನ್ನು ಸೂಕ್ತವಾಗಿ ನಿಭಾಯಿಸುತ್ತಿದೆ. ಸೋಂಕನ್ನು ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಇಬ್ಬರು ಮಕ್ಕಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸುದ್ದಿಸಂಸ್ಥೆಗಳಿಗೆ ತಿಳಿಸಿದ್ದಾರೆ.

ನೋರೋವೈರಸ್ ನೀರು ಮತ್ತು ಆಹಾರದ ಕಣಗಳ ಮೂಲಕ ಹರಡುತ್ತದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ನೊರೊವೈರಸ್ ಸೋಂಕು ಸಾಮಾನ್ಯವಾಗಿ ಎರಡು ದಿನಗಳವರೆಗೆ ಇರುತ್ತದೆ ಮತ್ತು ಇದು ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮಗಳನ್ನು ಬೀರುವುದಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ, ನೊರೊವೈರಸ್ ಚಿಕ್ಕವರು ಮತ್ತು ವಯಸ್ಸಾದವರಲ್ಲಿ ನಿರ್ಜಲೀಕರಣವನ್ನು ಉಂಟುಮಾಡಬಹುದು. ಕೆಲವು ರೋಗಿಗಳಲ್ಲಿ, ಸೋಂಕು ತಗುಲಿದ ನಂತರ ದೇಹವು ಒಂದು ವಾರದವರೆಗೆ ದುರ್ಬಲಗೊಂಡಿರುತ್ತದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

2021ರ ನವೆಂಬರ್‌ ನಲ್ಲಿ ಕೇರಳಾದಲ್ಲಿ ಮೊದಲಬಾರಿ ನೋರೋ ವೈರಸ್‌ ಪ್ರಕರಣಗಳು ವರದಿಯಾಗಿದ್ದವು. ವಯನಾಡಿನ ಪಶು ವೈದ್ಯಕೀಯ ವಿವಿಯ 13 ವಿದ್ಯಾರ್ಥಿಗಳಿಗೆ ಸೋಂಕು ತಗುಲಿತ್ತು. ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರಿಂದ ಮತ್ತೆ ಪ್ರಕರಣಗಳು ಕಾಣಸಿಕೊಂಡಿರಲಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು