10:12 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ಕೇರಳದಲ್ಲಿ ಮತ್ತೆ ನೋರೋ ವೈರಸ್ ಭೀತಿ:‌ ಇಬ್ಬರು ಶಾಲಾ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆ

07/06/2022, 09:33

ಕೊಚ್ಚಿ(reporterkarnataka.com): ಕೇರಳ ರಾಜ್ಯದಲ್ಲಿ ಎರಡು ನೋರೋ ವೈರಸ್ ಪ್ರಕರಣಗಳ ದೃಢಪಟ್ಟಿವೆ.

ರಾಜಧಾನಿ ತಿರುವನಂತಪುರಂನ ವಿಝಿಂಜಂನ ಇಬ್ಬರು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ಸಾಂಕ್ರಾಮಿಕದ ಸೋಂಕು ಪತ್ತೆಯಾಗಿದೆ.

ಈ ಶಾಲೆಯಲ್ಲಿ ವಿಷಪೂರಿತ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಈ ವಿದ್ಯಾರ್ಥಿಗಳಲ್ಲಿ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿತ್ತು. ಈ ಸಂಬಂಧ ಆಸ್ಪತ್ರೆಗೆ ದಾಖಲಾದ 42 ವಿದ್ಯಾರ್ಥಿಗಳ ರಕ್ತದ ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆ 42 ಮಾದರಿಗಳಲ್ಲಿ, ಎರಡು ನೋರೋವೈರಸ್‌ ಪ್ರಕರಣಗಳು ಪತ್ತೆಯಾಗಿವೆ.

ಜನರು ನೋರೋವೈರಸ್‌ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ರಾಜ್ಯದ ಆರೋಗ್ಯ ಇಲಾಖೆಯು ಪರಿಸ್ಥಿತಿಯನ್ನು ಸೂಕ್ತವಾಗಿ ನಿಭಾಯಿಸುತ್ತಿದೆ. ಸೋಂಕನ್ನು ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಇಬ್ಬರು ಮಕ್ಕಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸುದ್ದಿಸಂಸ್ಥೆಗಳಿಗೆ ತಿಳಿಸಿದ್ದಾರೆ.

ನೋರೋವೈರಸ್ ನೀರು ಮತ್ತು ಆಹಾರದ ಕಣಗಳ ಮೂಲಕ ಹರಡುತ್ತದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ನೊರೊವೈರಸ್ ಸೋಂಕು ಸಾಮಾನ್ಯವಾಗಿ ಎರಡು ದಿನಗಳವರೆಗೆ ಇರುತ್ತದೆ ಮತ್ತು ಇದು ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮಗಳನ್ನು ಬೀರುವುದಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ, ನೊರೊವೈರಸ್ ಚಿಕ್ಕವರು ಮತ್ತು ವಯಸ್ಸಾದವರಲ್ಲಿ ನಿರ್ಜಲೀಕರಣವನ್ನು ಉಂಟುಮಾಡಬಹುದು. ಕೆಲವು ರೋಗಿಗಳಲ್ಲಿ, ಸೋಂಕು ತಗುಲಿದ ನಂತರ ದೇಹವು ಒಂದು ವಾರದವರೆಗೆ ದುರ್ಬಲಗೊಂಡಿರುತ್ತದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

2021ರ ನವೆಂಬರ್‌ ನಲ್ಲಿ ಕೇರಳಾದಲ್ಲಿ ಮೊದಲಬಾರಿ ನೋರೋ ವೈರಸ್‌ ಪ್ರಕರಣಗಳು ವರದಿಯಾಗಿದ್ದವು. ವಯನಾಡಿನ ಪಶು ವೈದ್ಯಕೀಯ ವಿವಿಯ 13 ವಿದ್ಯಾರ್ಥಿಗಳಿಗೆ ಸೋಂಕು ತಗುಲಿತ್ತು. ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರಿಂದ ಮತ್ತೆ ಪ್ರಕರಣಗಳು ಕಾಣಸಿಕೊಂಡಿರಲಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು