2:36 PM Thursday16 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ

ಇತ್ತೀಚಿನ ಸುದ್ದಿ

ಕೇರಳ ರಾಜ್ಯ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನ ಪ್ರಚಾರ ಪತ್ರ ಬಿಡುಗಡೆ: ವಿವಿಧ ಸಂಘಟನೆಗಳ ಪ್ರತಿನಿಧಿಗಳ ಸಭೆ

27/09/2024, 23:44

ಕಾಸರಗೋಡು(reporterkarnataka.com): ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಆಶ್ರಯದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡು ಇದರ ಸಹಯೋಗದಲ್ಲಿ ನವೆಂಬರ್ 10ರಂದು ನಡೆಯಲಿರುವ ಕೇರಳ ರಾಜ್ಯ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವಿವಿಧ ಸಂಘಟನೆಗಳ ಪ್ರತಿನಿಧಿಗಳ ಸಭೆ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಹಾಗೂ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಸಭೆಯ ಅಧ್ಯಕ್ಷತೆ ವಹಿಸಿದರು. ಕಾಸರಗೋಡು ನಗರ ಸಭೆಯ ಸದಸ್ಯೆ ಶಾರದಾ ಉದ್ಘಾಟಿಸಿದರು. ಕರ್ನಾಟಕ ಕಲಾ ಮತ್ತು ಸಾಂಸ್ಕೃತಿಕ ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಯು.ಆರ್ ಶೆಟ್ಟಿ , ನಿರಂಜನ ಕೊರಕ್ಕೋಡು, ಕೆ. ಗುರುಪ್ರಸಾದ್ ಕೋಟೆಕಣಿ, ಲವ ಮೀಪುಗುರಿ, ದಿವಾಕರ ಅಶೋಕ್ ನಗರ, ಕುಶಲಕುಮಾರ್ ಪಾರಕಟ್ಟೆ ಮೊದಲಾದವರು ಸಲಹೆ ಸೂಚನೆಯಿತ್ತರು. ಜಗದೀಶ್ ಕೂಡ್ಲು ಕಾರ್ಯಕ್ರಮ ನಿರೂಪಿಸಿದರು. ಅನಿಲ್ ರಾಜ್ ನಾಗರಕಟ್ಟೆ ವಂದಿಸಿದರು.
ಸಂಘಟನೆಗಳ ಸಮಾಲೋಚನಾ ಸಭೆಯಲ್ಲಿ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ಸ್ವಾಗತ ಸಮಿತಿ ಅಧ್ಯಕ್ಷರಾಗಿ ಶಿವರಾಮ ಕಾಸರಗೋಡು, ಪ್ರಧಾನ ಸಂಚಾಲಕರಾಗಿ ಕೆ . ಜಗದೀಶ ಕೂಡ್ಲು ಹಾಗೂ ಕಾರ್ಯಕ್ರಮ ಸಂಯೋಜನ ಸಮಿತಿಯ ಅಧ್ಯಕ್ಷರಾಗಿ ಗುರುಪ್ರಸಾದ್ ಕೋಟೆ ಕಣಿ, ಗೌರವ ಸಲಹೆಗಾರರಾಗಿ ಕೆ. ನಿರಂಜನ ಕೊರಕ್ಕೋಡು, ಸಂಚಾಲಕರಾಗಿ ಯು. ಆರ್ ಶೆಟ್ಟಿ ಮಂಗಳೂರು, ಪ್ರದೀಪ್ ಬೇಕಲ್, ದಿವಾಕರ ಅಶೋಕ್ ನಗರ್, ಶ್ರೀಕಾಂತ್ ಕಾಸರಗೋಡು, ಕುಶಲಕುಮಾರ್ ಕೆ., ಅನಿಲ್ ರಾಜ್ ನಾಗರಕಟ್ಟೆ, ಅವರನ್ನು ಆಯ್ಕೆ ಮಾಡಲಾಯಿತು.
2024 ನವೆಂಬರ್ 10ರಂದು ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆಯಲಿರುವ ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ ಇದರ ಪ್ರಚಾರ ಪತ್ರವನ್ನು ಕಾಸರಗೋಡು ನಗರಸಭಾ ಸದಸ್ಯೆ ಶಾರದಾ ಅವರು ಮಕ್ಕಳಿಗೆ ನೀಡಿ ಬಿಡುಗಡೆಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು