2:06 PM Thursday20 - November 2025
ಬ್ರೇಕಿಂಗ್ ನ್ಯೂಸ್
ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌…

ಇತ್ತೀಚಿನ ಸುದ್ದಿ

ಕೇರಳ ರಾಜ್ಯ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನ ಪ್ರಚಾರ ಪತ್ರ ಬಿಡುಗಡೆ: ವಿವಿಧ ಸಂಘಟನೆಗಳ ಪ್ರತಿನಿಧಿಗಳ ಸಭೆ

27/09/2024, 23:44

ಕಾಸರಗೋಡು(reporterkarnataka.com): ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಆಶ್ರಯದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡು ಇದರ ಸಹಯೋಗದಲ್ಲಿ ನವೆಂಬರ್ 10ರಂದು ನಡೆಯಲಿರುವ ಕೇರಳ ರಾಜ್ಯ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವಿವಿಧ ಸಂಘಟನೆಗಳ ಪ್ರತಿನಿಧಿಗಳ ಸಭೆ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಹಾಗೂ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಸಭೆಯ ಅಧ್ಯಕ್ಷತೆ ವಹಿಸಿದರು. ಕಾಸರಗೋಡು ನಗರ ಸಭೆಯ ಸದಸ್ಯೆ ಶಾರದಾ ಉದ್ಘಾಟಿಸಿದರು. ಕರ್ನಾಟಕ ಕಲಾ ಮತ್ತು ಸಾಂಸ್ಕೃತಿಕ ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಯು.ಆರ್ ಶೆಟ್ಟಿ , ನಿರಂಜನ ಕೊರಕ್ಕೋಡು, ಕೆ. ಗುರುಪ್ರಸಾದ್ ಕೋಟೆಕಣಿ, ಲವ ಮೀಪುಗುರಿ, ದಿವಾಕರ ಅಶೋಕ್ ನಗರ, ಕುಶಲಕುಮಾರ್ ಪಾರಕಟ್ಟೆ ಮೊದಲಾದವರು ಸಲಹೆ ಸೂಚನೆಯಿತ್ತರು. ಜಗದೀಶ್ ಕೂಡ್ಲು ಕಾರ್ಯಕ್ರಮ ನಿರೂಪಿಸಿದರು. ಅನಿಲ್ ರಾಜ್ ನಾಗರಕಟ್ಟೆ ವಂದಿಸಿದರು.
ಸಂಘಟನೆಗಳ ಸಮಾಲೋಚನಾ ಸಭೆಯಲ್ಲಿ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ಸ್ವಾಗತ ಸಮಿತಿ ಅಧ್ಯಕ್ಷರಾಗಿ ಶಿವರಾಮ ಕಾಸರಗೋಡು, ಪ್ರಧಾನ ಸಂಚಾಲಕರಾಗಿ ಕೆ . ಜಗದೀಶ ಕೂಡ್ಲು ಹಾಗೂ ಕಾರ್ಯಕ್ರಮ ಸಂಯೋಜನ ಸಮಿತಿಯ ಅಧ್ಯಕ್ಷರಾಗಿ ಗುರುಪ್ರಸಾದ್ ಕೋಟೆ ಕಣಿ, ಗೌರವ ಸಲಹೆಗಾರರಾಗಿ ಕೆ. ನಿರಂಜನ ಕೊರಕ್ಕೋಡು, ಸಂಚಾಲಕರಾಗಿ ಯು. ಆರ್ ಶೆಟ್ಟಿ ಮಂಗಳೂರು, ಪ್ರದೀಪ್ ಬೇಕಲ್, ದಿವಾಕರ ಅಶೋಕ್ ನಗರ್, ಶ್ರೀಕಾಂತ್ ಕಾಸರಗೋಡು, ಕುಶಲಕುಮಾರ್ ಕೆ., ಅನಿಲ್ ರಾಜ್ ನಾಗರಕಟ್ಟೆ, ಅವರನ್ನು ಆಯ್ಕೆ ಮಾಡಲಾಯಿತು.
2024 ನವೆಂಬರ್ 10ರಂದು ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆಯಲಿರುವ ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ ಇದರ ಪ್ರಚಾರ ಪತ್ರವನ್ನು ಕಾಸರಗೋಡು ನಗರಸಭಾ ಸದಸ್ಯೆ ಶಾರದಾ ಅವರು ಮಕ್ಕಳಿಗೆ ನೀಡಿ ಬಿಡುಗಡೆಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು