2:52 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಕೇರಳ ರಾಜ್ಯ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನ ಪ್ರಚಾರ ಪತ್ರ ಬಿಡುಗಡೆ: ವಿವಿಧ ಸಂಘಟನೆಗಳ ಪ್ರತಿನಿಧಿಗಳ ಸಭೆ

27/09/2024, 23:44

ಕಾಸರಗೋಡು(reporterkarnataka.com): ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಆಶ್ರಯದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡು ಇದರ ಸಹಯೋಗದಲ್ಲಿ ನವೆಂಬರ್ 10ರಂದು ನಡೆಯಲಿರುವ ಕೇರಳ ರಾಜ್ಯ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವಿವಿಧ ಸಂಘಟನೆಗಳ ಪ್ರತಿನಿಧಿಗಳ ಸಭೆ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಹಾಗೂ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಸಭೆಯ ಅಧ್ಯಕ್ಷತೆ ವಹಿಸಿದರು. ಕಾಸರಗೋಡು ನಗರ ಸಭೆಯ ಸದಸ್ಯೆ ಶಾರದಾ ಉದ್ಘಾಟಿಸಿದರು. ಕರ್ನಾಟಕ ಕಲಾ ಮತ್ತು ಸಾಂಸ್ಕೃತಿಕ ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಯು.ಆರ್ ಶೆಟ್ಟಿ , ನಿರಂಜನ ಕೊರಕ್ಕೋಡು, ಕೆ. ಗುರುಪ್ರಸಾದ್ ಕೋಟೆಕಣಿ, ಲವ ಮೀಪುಗುರಿ, ದಿವಾಕರ ಅಶೋಕ್ ನಗರ, ಕುಶಲಕುಮಾರ್ ಪಾರಕಟ್ಟೆ ಮೊದಲಾದವರು ಸಲಹೆ ಸೂಚನೆಯಿತ್ತರು. ಜಗದೀಶ್ ಕೂಡ್ಲು ಕಾರ್ಯಕ್ರಮ ನಿರೂಪಿಸಿದರು. ಅನಿಲ್ ರಾಜ್ ನಾಗರಕಟ್ಟೆ ವಂದಿಸಿದರು.
ಸಂಘಟನೆಗಳ ಸಮಾಲೋಚನಾ ಸಭೆಯಲ್ಲಿ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ಸ್ವಾಗತ ಸಮಿತಿ ಅಧ್ಯಕ್ಷರಾಗಿ ಶಿವರಾಮ ಕಾಸರಗೋಡು, ಪ್ರಧಾನ ಸಂಚಾಲಕರಾಗಿ ಕೆ . ಜಗದೀಶ ಕೂಡ್ಲು ಹಾಗೂ ಕಾರ್ಯಕ್ರಮ ಸಂಯೋಜನ ಸಮಿತಿಯ ಅಧ್ಯಕ್ಷರಾಗಿ ಗುರುಪ್ರಸಾದ್ ಕೋಟೆ ಕಣಿ, ಗೌರವ ಸಲಹೆಗಾರರಾಗಿ ಕೆ. ನಿರಂಜನ ಕೊರಕ್ಕೋಡು, ಸಂಚಾಲಕರಾಗಿ ಯು. ಆರ್ ಶೆಟ್ಟಿ ಮಂಗಳೂರು, ಪ್ರದೀಪ್ ಬೇಕಲ್, ದಿವಾಕರ ಅಶೋಕ್ ನಗರ್, ಶ್ರೀಕಾಂತ್ ಕಾಸರಗೋಡು, ಕುಶಲಕುಮಾರ್ ಕೆ., ಅನಿಲ್ ರಾಜ್ ನಾಗರಕಟ್ಟೆ, ಅವರನ್ನು ಆಯ್ಕೆ ಮಾಡಲಾಯಿತು.
2024 ನವೆಂಬರ್ 10ರಂದು ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆಯಲಿರುವ ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ ಇದರ ಪ್ರಚಾರ ಪತ್ರವನ್ನು ಕಾಸರಗೋಡು ನಗರಸಭಾ ಸದಸ್ಯೆ ಶಾರದಾ ಅವರು ಮಕ್ಕಳಿಗೆ ನೀಡಿ ಬಿಡುಗಡೆಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು