7:48 PM Friday9 - January 2026
ಬ್ರೇಕಿಂಗ್ ನ್ಯೂಸ್
ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು

ಇತ್ತೀಚಿನ ಸುದ್ದಿ

ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ

09/01/2026, 15:56

ಬೆಂಗಳೂರು(reporterkarnataka.com): ಕೇರಳ‌ ಸರ್ಕಾರ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ- 2025ರ ನಡೆಯ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ‌ ಸಚಿವ ಶಿವರಾಜ್ ತಂಗಡಗಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಕೇರಳದ‌ ಗಡಿ ಜಿಲ್ಲೆಯಲ್ಲಿ‌ ವಾಸ ಮಾಡುತ್ತಿರುವ ಜನರ ಮನಸ್ಸು ಸಂಪೂರ್ಣ ಕನ್ನಡ‌‌ ಭಾಷೆಯೊಂದಿಗೆ ಬೆರೆತು ಹೋಗಿದೆ. ಕೇರಳದಲ್ಲಿ ಸುಮಾರು 202 ಕನ್ನಡ ಮಾಧ್ಯಮ ಶಾಲೆಗಳಿವೆ. ನಾನೇ ಖುದ್ದಾಗಿ ಕಳೆದ ಒಂದೂವರೆ ವರ್ಷದ ಹಿಂದೆ ಎಡನೀರು ಮಠಕ್ಕೆ ಭೇಟಿ ನೀಡಿ, ಮಠ ನಿರ್ವಹಣೆ ಮಾಡುತ್ತಿರುವ ಕನ್ನಡ ಶಾಲಾ ಕಾರ್ಯಕ್ರಮದಲ್ಲಿ‌ ಭಾಗವಹಿಸಿದ್ದೆ.
ಕಾಸರಗೋಡಿನ‌ ಜನರ ಮನಸ್ಸು ಹಾಗೂ ಜೀವನ ಸಂಪೂರ್ಣ ಕನ್ನಡ ಭಾಷಾಮಯವಾಗಿದೆ. ಅಲ್ಲಿನ ಕನ್ನಡ ಭಾಷಾ ಬಳಕೆ‌ ನೋಡಿದ ನನಗೆ ಕೇರಳಕ್ಕೆ ಭೇಟಿ ನೀಡಿದ್ದೆ ಎಂದು ಅನಿಸಲಿಲ್ಲ. ಹೀಗಿದ್ದು, ಕೇರಳ ಸರ್ಕಾರ ಇಂತಹ ಮಸೂದೆ ಜಾರಿಗೆ ತಂದಿರುವುದು ಸರಿಯಲ್ಲ.
ಕೇರಳ ವಿಧಾನಸಭೆ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ – 2025ನ್ನು ಕೂಡಲೇ ಹಿಂಪಡೆಯಬೇಕು. ಯಾವುದೇ ಸಂದರ್ಭದಲ್ಲಿ ನಮ್ಮ ಸರ್ಕಾರ ಕನ್ನಡದ ಮನಸ್ಸು ಹಾಗೂ ಭಾವನೆಗಳಿಗೆ ಧಕ್ಕೆಯಾಗಲು ಬಿಡುವುದಿಲ್ಲ ಎಂದಿದ್ದಾರೆ.
ಈಗಾಗಲೇ ಕೇರಳ‌ ಸರ್ಕಾರ ಮಸೂದೆಯನ್ನು ಅಂಗೀಕರಿಸುವ ಮೂಲಕ ಮಕ್ಕಳ‌ ಹಕ್ಕಿನ ಉಲ್ಲಂಘನೆ ಮಾಡಿದ್ದು, ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ ಕೂಡ ಮಾಡಿದೆ.
ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ನಿಯೋಗ ಕೇರಳ‌ ರಾಜ್ಯಪಾಲರನ್ನು ಭೇಟಿಯಾಗಿ ಮಸೂದೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದೆ. ಅಂಗೀಕಾರಗೊಂಡಿರುವ ಮಸೂದೆಯ ಮುಂದಿನ‌ ಹಂತಕ್ಕೆ ಹೋಗದಂತೆ ತಡೆಯಬೇಕು ಎಂದು ಆಗ್ರಹಿಸಿದೆ.‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ‌ ಚರ್ಚೆ ನಡೆಸಿ, ನಿಯೋಗವೊಂದನ್ನು ಅಲ್ಲಿನ‌ ರಾಜ್ಯಪಾಲರ ಬಳಿ‌ ಕೊಂಡಯ್ಯಲಾಗುವುದು ಎಂದು ತಿಳಿಸಿದ್ದಾರೆ.
ಕೂಡಲೇ‌ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ, ಸಂವಿಧಾನದ‌ 205ಬಿಯಲ್ಲಿ ಕಲ್ಪಿಸಿರುವ ಅವಕಾಶದಂತೆ ಭಾಷಾ ನಿರ್ದೇಶಕರನ್ನು ಕೇರಳ ರಾಜ್ಯಕ್ಕೆ ಕಳುಹಿಸಿ ಕೊಡಬೇಕು ಎಂದು ಒತ್ತಾಯಿಸಿರುವ ಅವರು, ಈ‌ ಕುರಿತಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಾಗುವುದು ಎಂದು ಹೇಳಿದ್ದಾರೆ.
ಇನ್ನು ರಾಜ್ಯದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ರಾಜೀವ್ ಚಂದ್ರಶೇಖರ್ ಅವರು ಕೂಡ ಕೇರಳದ ಈ‌ ನಡೆ ಬಗ್ಗೆ ಧ್ವನಿ ಎತ್ತಬೇಕು ಎಂದು ಶಿವರಾಜ್ ತಂಗಡಗಿ ಅವರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು