4:48 PM Friday8 - May 2026
ಬ್ರೇಕಿಂಗ್ ನ್ಯೂಸ್
ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಇತ್ತೀಚಿನ ಸುದ್ದಿ

ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ

09/01/2026, 15:56

ಬೆಂಗಳೂರು(reporterkarnataka.com): ಕೇರಳ‌ ಸರ್ಕಾರ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ- 2025ರ ನಡೆಯ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ‌ ಸಚಿವ ಶಿವರಾಜ್ ತಂಗಡಗಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಕೇರಳದ‌ ಗಡಿ ಜಿಲ್ಲೆಯಲ್ಲಿ‌ ವಾಸ ಮಾಡುತ್ತಿರುವ ಜನರ ಮನಸ್ಸು ಸಂಪೂರ್ಣ ಕನ್ನಡ‌‌ ಭಾಷೆಯೊಂದಿಗೆ ಬೆರೆತು ಹೋಗಿದೆ. ಕೇರಳದಲ್ಲಿ ಸುಮಾರು 202 ಕನ್ನಡ ಮಾಧ್ಯಮ ಶಾಲೆಗಳಿವೆ. ನಾನೇ ಖುದ್ದಾಗಿ ಕಳೆದ ಒಂದೂವರೆ ವರ್ಷದ ಹಿಂದೆ ಎಡನೀರು ಮಠಕ್ಕೆ ಭೇಟಿ ನೀಡಿ, ಮಠ ನಿರ್ವಹಣೆ ಮಾಡುತ್ತಿರುವ ಕನ್ನಡ ಶಾಲಾ ಕಾರ್ಯಕ್ರಮದಲ್ಲಿ‌ ಭಾಗವಹಿಸಿದ್ದೆ.
ಕಾಸರಗೋಡಿನ‌ ಜನರ ಮನಸ್ಸು ಹಾಗೂ ಜೀವನ ಸಂಪೂರ್ಣ ಕನ್ನಡ ಭಾಷಾಮಯವಾಗಿದೆ. ಅಲ್ಲಿನ ಕನ್ನಡ ಭಾಷಾ ಬಳಕೆ‌ ನೋಡಿದ ನನಗೆ ಕೇರಳಕ್ಕೆ ಭೇಟಿ ನೀಡಿದ್ದೆ ಎಂದು ಅನಿಸಲಿಲ್ಲ. ಹೀಗಿದ್ದು, ಕೇರಳ ಸರ್ಕಾರ ಇಂತಹ ಮಸೂದೆ ಜಾರಿಗೆ ತಂದಿರುವುದು ಸರಿಯಲ್ಲ.
ಕೇರಳ ವಿಧಾನಸಭೆ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ – 2025ನ್ನು ಕೂಡಲೇ ಹಿಂಪಡೆಯಬೇಕು. ಯಾವುದೇ ಸಂದರ್ಭದಲ್ಲಿ ನಮ್ಮ ಸರ್ಕಾರ ಕನ್ನಡದ ಮನಸ್ಸು ಹಾಗೂ ಭಾವನೆಗಳಿಗೆ ಧಕ್ಕೆಯಾಗಲು ಬಿಡುವುದಿಲ್ಲ ಎಂದಿದ್ದಾರೆ.
ಈಗಾಗಲೇ ಕೇರಳ‌ ಸರ್ಕಾರ ಮಸೂದೆಯನ್ನು ಅಂಗೀಕರಿಸುವ ಮೂಲಕ ಮಕ್ಕಳ‌ ಹಕ್ಕಿನ ಉಲ್ಲಂಘನೆ ಮಾಡಿದ್ದು, ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ ಕೂಡ ಮಾಡಿದೆ.
ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ನಿಯೋಗ ಕೇರಳ‌ ರಾಜ್ಯಪಾಲರನ್ನು ಭೇಟಿಯಾಗಿ ಮಸೂದೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದೆ. ಅಂಗೀಕಾರಗೊಂಡಿರುವ ಮಸೂದೆಯ ಮುಂದಿನ‌ ಹಂತಕ್ಕೆ ಹೋಗದಂತೆ ತಡೆಯಬೇಕು ಎಂದು ಆಗ್ರಹಿಸಿದೆ.‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ‌ ಚರ್ಚೆ ನಡೆಸಿ, ನಿಯೋಗವೊಂದನ್ನು ಅಲ್ಲಿನ‌ ರಾಜ್ಯಪಾಲರ ಬಳಿ‌ ಕೊಂಡಯ್ಯಲಾಗುವುದು ಎಂದು ತಿಳಿಸಿದ್ದಾರೆ.
ಕೂಡಲೇ‌ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ, ಸಂವಿಧಾನದ‌ 205ಬಿಯಲ್ಲಿ ಕಲ್ಪಿಸಿರುವ ಅವಕಾಶದಂತೆ ಭಾಷಾ ನಿರ್ದೇಶಕರನ್ನು ಕೇರಳ ರಾಜ್ಯಕ್ಕೆ ಕಳುಹಿಸಿ ಕೊಡಬೇಕು ಎಂದು ಒತ್ತಾಯಿಸಿರುವ ಅವರು, ಈ‌ ಕುರಿತಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಾಗುವುದು ಎಂದು ಹೇಳಿದ್ದಾರೆ.
ಇನ್ನು ರಾಜ್ಯದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ರಾಜೀವ್ ಚಂದ್ರಶೇಖರ್ ಅವರು ಕೂಡ ಕೇರಳದ ಈ‌ ನಡೆ ಬಗ್ಗೆ ಧ್ವನಿ ಎತ್ತಬೇಕು ಎಂದು ಶಿವರಾಜ್ ತಂಗಡಗಿ ಅವರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು