5:54 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಕೇರಳ ಕೊಲೆ- ದರೋಡೆ ಪ್ರಕರಣ: ಕೊಡಗು – ದಕ್ಷಿಣ ಕನ್ನಡ ಗಡಿಯಲ್ಲಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಆರೋಪಿಗಳು ಎಸ್ಕೇಪ್

19/09/2025, 13:03

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com

ಕೇರಳದಲ್ಲಿ ನಡೆದ ಕೊಲೆ ಹಾಗೂ ದರೋಡೆ ಪ್ರಕರಣದ ಆರೋಪಿಗಳು ಕೊಡಗು- ದಕ್ಷಿಣ ಕನ್ನಡ ಗಡಿಯಲ್ಲಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಎಸ್ಕೇಪ್ ಆದ ಘಟನೆ ನಡೆದಿದೆ.
ಕೇರಳದ ಪಾಲಕಾಡುನಲ್ಲಿ ಕಳವು ಮತ್ತು ಕೊಲೆ ಪ್ರಕರಣ ದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸಲು ಪೊಲೀಸರು ಸಿದ್ದವಾಗಿದ್ದ ಬೆನ್ನಲ್ಲೇ ಪೊಲೀಸರಿಗೆ ಸಿಗದೆ ಪರಾರಿ ಆದ ಘಟನೆ ನಡೆದಿದೆ. ದರೋಡೆ ಆರೋಪಿಗಳು ಕೊಡಗಿನಲ್ಲಿ ಸಂಚಾರಿಸುತ್ತಿರುವ ಬಗ್ಗೆ ಟ್ರ್ಯಾಪ್ ಮಾಡಿದ್ದ ಪೊಲೀಸರು ದಕ್ಷಿಣ ಕನ್ನಡದ ಸುಳ್ಯ ಮಾರ್ಗವಾಗಿ ತೆರಳುವ ವಾಹನವನ್ನು ಹಿಡಿಯಲು ಸಂಪಾಜೆ ಬಳಿಯ ಕಲ್ಲುಗುoಡಿ ಸೇತುವೆ ಬಳಿ ಪೊಲೀಸರು ಸಜ್ಜಗಿದ್ದರು, ಕಲ್ಲುಗುoಡಿ ಔಟ್ ಪೋಸ್ಟ್ ಬಳಿ ಆರೋಪಿಗಳು ಇದ್ದ ಕಪ್ಪು ಬಣ್ಣದ ಮಹಿಂದ್ರಾ ತಾರ್ ದಾಟು ತ್ತಿದ್ದಂತೆ ಅಲರ್ಟ್ ಆಗಿದ್ದ ಮಾಹಿತಿ ಅದೇಗೋ ಅರಿತ ದರೋಡೆಕೋರರು, ದೇವರಕೊಲ್ಲಿ ಬಳಿ ವಾಹನ ನಿಲ್ಲಿಸಿ ಪರಾರಿ ಆಗಿದ್ದಾರೆ.ಈ ಕೃತ್ಯದಲ್ಲಿ ಗಂಡ ಹೆಂಡತಿ ಭಾಗಿಯಾಗಿದ್ದು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಕೇರಳದ ಪೊಲೀಸರು ನಡೆಸಲಾಗುತ್ತಿದ್ದು, ಸ್ಥಳೀಯ ಪೊಲೀಸರ ನೆರವು ಕೊರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು