8:14 PM Sunday23 - November 2025
ಬ್ರೇಕಿಂಗ್ ನ್ಯೂಸ್
ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ

ಇತ್ತೀಚಿನ ಸುದ್ದಿ

ಕೇರಳದ ಪಾನೂರಿನಲ್ಲಿ ಕೊರೊನಾ ಹೊಸ ಉಪ ತಳಿ ಪತ್ತೆ: ರಾಜ್ಯದಲ್ಲೂ ಮುಂಜಾಗ್ರತೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

17/12/2023, 17:02

ತಿರುವನಂತಪುರ(reporterarnataka.com):ಕೊರೊನಾ ಹೊಸ ಉಪ ತಳಿ ಪತ್ತೆಯಾಗುವ ಮೂಲಕ ಮತ್ತೆ ದೇಶದ ಜನತೆಗೆ ಶಾಕ್ ಕೊಟ್ಟಿದೆ. ಕೊರೊನಾ ಉಪತಳಿ ಜೆಎನ್ 1 ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದ್ದು, 80ರ ಹರೆಯ ವೃದ್ಧರೊಬ್ಬರು ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಹೈ ಅಲರ್ಟ್ ವಹಿಸಲಾಗಿದೆ.
ಕೇರಳದಲ್ಲಿ ಕೊರೊನಾ ಉಪ ತಳಿ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೂಡ ಹೈ ಅಲರ್ಟ್ ಆಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತುರ್ತು ಸಭೆ ನಡೆಸಿ, ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮಂಗಳವಾರ ಹೈ ಪವರ್ ಸಭೆ ಕರೆಯಲಾಗಿದೆ. ಎಲ್ಲರೂ ಎಚ್ಚರಿಕೆಯಿಂದ ಇರೋಣ. ಅನಾಹುತ ಆಗುವುದಕ್ಕೆ ಬಿಡಬಾರದು.‌ ಅಂತರ್ ರಾಜ್ಯ ಗಡಿ ಭಾಗಗಳನ್ನು ಸೀಲ್ ಮಾಡೋದು, ರೈಲ್ವೆ, ವಿಮಾನ ನಿಲ್ದಾಣಗಳಲ್ಲಿ ಸದ್ಯಕ್ಕೆ ತಪಾಸಣೆ ಮಾಡೋದು ಅಗತ್ಯವಿಲ್ಲ. ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆಗೆ ಸಿದ್ಧತೆ ನಡೆದಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಕೇರಳದ ಕಣ್ಣೂರಿನ ಪಾನೂರಿನ 80ರ ಹರೆಯದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಕಣ್ಣೂರಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಸಾರ್ವಜನಿಕ ಸಭೆ, ಸಮಾರಂಭಗಳ ಮೇಲೆ ನಿರ್ಬಂಧಗಳನ್ನು ಹಾಕಲಾಗಿದೆ. ಆದರೆ ವೃದ್ದ ಸಾವನ್ನಪ್ಪಿರುವುದು ವಯೋಸಹಜ ಕಾಯಿಲೆಯಿಂದಲೋ ಅಥವಾ ಕೊರೊನಾ ಹೊಸ ಉಪ ತಳಿಯ ಸೋಂಕಿನಿಂದಲೋ ಎನ್ನುವ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಇದೀಗ ಕಂಡು ಬಂದಿರುವ ಜೆಎನ್ 1 ವೈರಸ್ ಓಮೈಕ್ರಾನ್ ಸಬ್ ವೇರಿಯಂಟ್ ಬಿಎ 2.86 ವಂಶಕ್ಕೆ ಸೇರಿದ್ದಾಗಿದೆ. ಪಿರೋಲಾ ಎಂದು ಇದನ್ನು ಕರೆಯಲಾಗುತ್ತದೆ. ಇದರ ತೀವ್ರತೆಯ ಬಗ್ಗೆ ಸಂಶೋಧನೆಗಳಿಂದ ಇನ್ನಷ್ಟೇ ತಿಳಿದು ಬರಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು