12:23 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕೇರಳದ ಪಾನೂರಿನಲ್ಲಿ ಕೊರೊನಾ ಹೊಸ ಉಪ ತಳಿ ಪತ್ತೆ: ರಾಜ್ಯದಲ್ಲೂ ಮುಂಜಾಗ್ರತೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

17/12/2023, 17:02

ತಿರುವನಂತಪುರ(reporterarnataka.com):ಕೊರೊನಾ ಹೊಸ ಉಪ ತಳಿ ಪತ್ತೆಯಾಗುವ ಮೂಲಕ ಮತ್ತೆ ದೇಶದ ಜನತೆಗೆ ಶಾಕ್ ಕೊಟ್ಟಿದೆ. ಕೊರೊನಾ ಉಪತಳಿ ಜೆಎನ್ 1 ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದ್ದು, 80ರ ಹರೆಯ ವೃದ್ಧರೊಬ್ಬರು ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಹೈ ಅಲರ್ಟ್ ವಹಿಸಲಾಗಿದೆ.
ಕೇರಳದಲ್ಲಿ ಕೊರೊನಾ ಉಪ ತಳಿ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೂಡ ಹೈ ಅಲರ್ಟ್ ಆಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತುರ್ತು ಸಭೆ ನಡೆಸಿ, ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮಂಗಳವಾರ ಹೈ ಪವರ್ ಸಭೆ ಕರೆಯಲಾಗಿದೆ. ಎಲ್ಲರೂ ಎಚ್ಚರಿಕೆಯಿಂದ ಇರೋಣ. ಅನಾಹುತ ಆಗುವುದಕ್ಕೆ ಬಿಡಬಾರದು.‌ ಅಂತರ್ ರಾಜ್ಯ ಗಡಿ ಭಾಗಗಳನ್ನು ಸೀಲ್ ಮಾಡೋದು, ರೈಲ್ವೆ, ವಿಮಾನ ನಿಲ್ದಾಣಗಳಲ್ಲಿ ಸದ್ಯಕ್ಕೆ ತಪಾಸಣೆ ಮಾಡೋದು ಅಗತ್ಯವಿಲ್ಲ. ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆಗೆ ಸಿದ್ಧತೆ ನಡೆದಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಕೇರಳದ ಕಣ್ಣೂರಿನ ಪಾನೂರಿನ 80ರ ಹರೆಯದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಕಣ್ಣೂರಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಸಾರ್ವಜನಿಕ ಸಭೆ, ಸಮಾರಂಭಗಳ ಮೇಲೆ ನಿರ್ಬಂಧಗಳನ್ನು ಹಾಕಲಾಗಿದೆ. ಆದರೆ ವೃದ್ದ ಸಾವನ್ನಪ್ಪಿರುವುದು ವಯೋಸಹಜ ಕಾಯಿಲೆಯಿಂದಲೋ ಅಥವಾ ಕೊರೊನಾ ಹೊಸ ಉಪ ತಳಿಯ ಸೋಂಕಿನಿಂದಲೋ ಎನ್ನುವ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಇದೀಗ ಕಂಡು ಬಂದಿರುವ ಜೆಎನ್ 1 ವೈರಸ್ ಓಮೈಕ್ರಾನ್ ಸಬ್ ವೇರಿಯಂಟ್ ಬಿಎ 2.86 ವಂಶಕ್ಕೆ ಸೇರಿದ್ದಾಗಿದೆ. ಪಿರೋಲಾ ಎಂದು ಇದನ್ನು ಕರೆಯಲಾಗುತ್ತದೆ. ಇದರ ತೀವ್ರತೆಯ ಬಗ್ಗೆ ಸಂಶೋಧನೆಗಳಿಂದ ಇನ್ನಷ್ಟೇ ತಿಳಿದು ಬರಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು