4:57 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಕೇರಳ ಪೊಲೀಸರಿಂದ ಸೋಮವಾರಪೇಟೆಯ ಮನೆಯೊಂದರ ಮೇಲೆ ದಾಳಿ: ವ್ಯಕ್ತಿ ತೀವ್ರ ಗಾಯ

26/09/2025, 15:16

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೇರಳ ರಾಜ್ಯದ ಪೊಲೀಸರ ತಂಡವೊಂದು ಸೋಮವಾರಪೇಟೆ ತಾಲ್ಲೂಕಿನ ಅಬುರುಕಟ್ಟೆ ಸಮೀಪದ ಮೋರಿಕಲ್ಲು ಗ್ರಾಮದ ಮನೆಯೊಂದಕ್ಕೆ ಏಕಾಏಕಿ ನುಗ್ಗಿ ಮನೆಯವರ ಮೇಲೆ ದಾಳಿ ನಡೆಸಿದ ಪರಿಣಾಮ ಒಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ.
ಕೇರಳದ ಪ್ರಕರಣವೊಂದರ ತನಿಖೆ ಸಂಬಂಧ ಸೋಮವಾರಪೇಟೆಗೆ ಆಗಮಿಸಿರುವ ಪೊಲೀಸರು ಇಂದು ಬೆಳಗ್ಗೆ ಮೋರಿಕಲ್ಲು ಗ್ರಾಮದ ಬಿನೇಶ್ ಎಂಬುವವರ ಮನೆ ಮೇಲೆ ದಾಳಿ ನಡೆಸಿ ಮನೆಯವರಿಗೆಲ್ಲ ಥಳಿಸಿ, ಅವಾಚ್ಯ ಶಬ್ದದಿಂದ ನಿಂದಿಸಿದ್ದು, ಬಿನೇಶ್ ತೀವ್ರವಾಗಿ ಗಾಯಗೊಂಡು ಸೋಮವಾರಪೇಟೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಂದಹಾಗೆ ಕೇರಳದ ಅಪರಾಧ ಪ್ರಕರಣದಲ್ಲಿ ಬೇಕಾದ ಆರೋಪಿ ಬಿನೇಶ್ ಸಹೋದರ, ಆತನ ಮನೆಗೆ ಮನೆಗೆ ದಾಳಿ ನಡೆಸುವ ಬದಲು ತಪ್ಪಾಗಿ ಬಿನೇಶ್ ಮನೆಗೆ ನುಗ್ಗಿದ್ದಾರೆ, ಈ ವೇಳೆ ಬಿನೇಶ್ ತಾನು ಹೃದಯ ಸಂಬಂಧಿಸಿದ ರೋಗದಿಂದ ಬಳಲೂತ್ತಿದ್ದೇನೆ, ಹೊಡಿಬೇಡಿ ಎಂದು ಅಂಗಲಾಚಿದರು ಎದೆಗೆ ಕಾಲಿನಿಂದ ಒದ್ದಿದ್ದು ಹಾಗೂ ದಾಳಿ ಮಾಡಿದ ಪೊಲೀಸರು ಮದ್ಯಪಾನ ಮಾಡಿ ಬಂದಿದ್ದರು ಎಂದು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು