2:51 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

Kerala | ಪ್ರಧಾನಿ ಮೋದಿ – ಕೇರಳ ಸಿಎಂ ಪಿಣರಾಯಿ ವಿಜಯನ್ ಒಂದೇ ವೇದಿಕೆಯಲ್ಲಿ!: ಅಕ್ಕಪಕ್ಕ ಕೂತ ಉಭಯ ನಾಯಕರು!!

02/05/2025, 21:35

ತಿರುವನಂತಪುರಂ(reporterkarnataka.com): ಸೈದ್ದಾಂತಿಕವಾಗಿ ಉತ್ತರ ಮತ್ತು ದಕ್ಷಿಣ ಧ್ರುವದಂತಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಇಂದು ಒಂದೇ ವೇದಿಕೆಯಲ್ಲಿ ಒಟ್ಟೊಟ್ಟಿಗೆ ಕಾಣಿಸಿಕೊಂಡರು. ಅಕ್ಕಪಕ್ಕ ಕೂತಿರುವ ಉಭಯ ನಾಯಕರು ಕೈಹಿಡಿದು ಕೊಂಡು ಏನೋ ಮಾತನಾಡಿದರು.
ಇದೆಲ್ಲ ನಡೆದಿರುವುದು ಕೇರಳದ ತಿರುವನಂತಪುರದಲ್ಲಿ ಅದಾನಿ ಸಮೂಹ ಸಂಸ್ಥೆ ಅಭಿವೃದ್ಧಿಪಡಿಸಿರುವ ವಿಳಿಂಜಂ ಬಂದರು ಉದ್ಘಾಟನೆ ಸಮಾರಂಭದಲ್ಲಿ.
ಬಂದರಿನ ಮೊದಲ ಹಂತದ ಸೌಲಭ್ಯವನ್ನು ಪ್ರಧಾನಿ ಮೋದಿ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಹಸ್ತಾಂತರಿಸಿದರು.
ವಿಳಿಂಜಂ ಬಂದರಿನ ಎರಡನೇ ಹಂತದ ಯೋಜನೆಗೂ ಮೋದಿ ಚಾಲನೆ ನೀಡಿದರು.
ವಿಳಿಂಜಂ ಅಂತಾರಾಷ್ಟ್ರೀಯ ಬಂದರು ಭಾರತದ ಮೊದಲ ಟ್ರಾನ್ಸ್​​ಶಿಪ್​​ಮೆಂಟ್ ಪೋರ್ಟ್ (ಹಡಗಿನಿಂದ ಹಡಗಿಗೆ ಸರಕು ಸಾಗಿಸುವ ಬಂದರು) ಆಗಿದೆ. ಅಂತಾರಾಷ್ಟ್ರೀಯ ವ್ಯಾಪಾರ ಮತ್ತು ಹಡಗು ಸಾಗಣೆಯಲ್ಲಿ ಭಾರತಕ್ಕೆ ಒಂದು ಮಹತ್ವದ ಪಾತ್ರ ಸಿಕ್ಕಂತಾಗುತ್ತದೆ. ಈ ಯೋಜನೆಯು ನವಯುಗದ ಅಭಿವೃದ್ಧಿಯ ಸಂಕೇತ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಅದಾನಿ ಸಮೂಹಕ್ಕೆ ಸೇರಿದ ಅದಾನಿ ಪೋರ್ಟ್ಸ್ (ಎಪಿಎಸ್​​ಇಝಡ್) ಈ ಆಳ ನೀರಿನ ಬಂದರನ್ನು ಅಭಿವೃದ್ಧಿಪಡಿಸಿದೆ. ಸರ್ಕಾರ ಮತ್ತು ಖಾಸಗಿ ಪಾಲುದಾರಿಕೆಯಲ್ಲಿ ನಡೆದ ಈ ಯೋಜನೆಯ ವೆಚ್ಚ ₹8,000 ಕೋಟಿ ಆಗಿದೆ.
ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ, ತಿರುವನಂತಪುರದ ಕಾಂಗ್ರೆಸ್‌ ಸಂಸದ ಶಶಿ ತರೂರ್ ವೇದಿಕೆಯಲ್ಲಿದ್ದರು.
(ಚಿತ್ರ ಕೃಪೆ: ಮಾತೃಭೂಮಿ)
.

ಇತ್ತೀಚಿನ ಸುದ್ದಿ

ಜಾಹೀರಾತು