6:17 PM Wednesday11 - March 2026
ಬ್ರೇಕಿಂಗ್ ನ್ಯೂಸ್
ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಇತ್ತೀಚಿನ ಸುದ್ದಿ

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: 5 ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ದಾರುಣ ಸಾವು

03/12/2024, 18:35

ತಿರುವನಂತಪುರಂ(reporterkarnataka.com): ಕೇರಳದ ಅಲಪುಝಾ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಮೃತಪಟ್ಟವರನ್ನು ಸಂದೀಪ್ ವಲ್ಸನ್, ಆಯೂಷ್ ಶಾಜಿ, ಮಹಮ್ಮದ್ ಇಬ್ರಾಹಿಂ ಪಿಪಿ, ದೇವನಂದನ್ ಹಾಗೂ ಮಹಮ್ಮದ್ ಅಬ್ದುಲ್ ಜಬ್ಬ‌ರ್ ಎಂದು ಗುರುತಿಸಲಾಗಿದೆ.
ಬಸ್‌ ಮತ್ತು ಕಾರು ನಡುವೆ ಕರ್ಲಕೋಡ್ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ಸೋಮವಾರ ತಡರಾತ್ರಿ 10 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಕಾರಿನಲ್ಲಿದ್ದ
ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.ಹಾಗೆ ಬಸ್ಸಿನಲ್ಲಿದ್ದ ಹಲವರು ಸಣ್ಣಪುಟ್ಟ ಗಾಯಗಳಾಗಿವೆ.
ಮೃತಪಟ್ಟ ವಿದ್ಯಾರ್ಥಿಗಳು ಪ್ರಥಮ ವರ್ಷದ ವೈದ್ಯಕೀಯ
ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.ಭೀಕರ ಅಪಘಾತದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು