4:34 PM Tuesday8 - July 2025
ಬ್ರೇಕಿಂಗ್ ನ್ಯೂಸ್
ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ…

ಇತ್ತೀಚಿನ ಸುದ್ದಿ

ಕೇರಳ ಸಮುದ್ರದಲ್ಲಿ ಸಿಕ್ಕಿತು ತಿಮಿಂಗಿಲ ವಾಂತಿ!: ಇದರ ಬೆಲೆ ಬರೋಬ್ಬರಿ 28 ಕೋಟಿ!!

24/07/2022, 08:06

ತಿರುವನಂತಪುರ(reporterkarnataka.com) ಕೇರಳ ಸಮೀಪದ ವಿಝಿಂಜಂನಲ್ಲಿ ಮೀನುಗಾರರ ಗುಂಪು 28 ಕೋಟಿ ರೂಪಾಯಿ ಮೌಲ್ಯದ ತಿಮಿಂಗಿಲದ ಅಂಬರ್ ‌ಗ್ರಿಸ್ ಅಥವಾ ವಾಂತಿಯನ್ನು ಪತ್ತೆ ಮಾಡಿದೆ.

ತಿಮಿಂಗಿಲದ ಈ ವಾಂತಿ ಬರೋಬ್ಬರಿ 28 ಕೆಜಿ 400 ಗ್ರಾಂ ತೂಕವಿತ್ತು. ಮೀನುಗಾರರು ಸಮುದ್ರದ ದಡಕ್ಕೆ ಎಳೆದು ತಂದಿದ್ದಾರೆ. ಅದನ್ನು ಕೂಡಲೇ ಕರಾವಳಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಅಧಿಕಾರಿಗಳು ತಿಮಿಂಗಿಲ ಹೊರಹಾಕಿದ್ದನ್ನು ವಶಕ್ಕೆ ಪಡೆದಿದ್ದಾರೆ. ಅದು ತಿಮಿಂಗಿಲದ ವಾಂತಿ ಹೌದೋ ಅಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಲು ರಾಜೀವ್‌ ಗಾಂಧಿ ಸೆಂಟರ್‌ ಆಫ್‌ ಬಯಾಟೆಕ್ನಾಲಜಿಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ.

ತಿಮಿಂಗಿಲದ ವಾಂತಿಯನ್ನು ಸುಗಂಧ ದ್ರವ್ಯಗಳ ತಯಾರಿಕೆಗೆ ಬಳಸಲಾಗುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಕೆಜಿ ವಾಂತಿಯ ಬೆಲೆ ಬರೋಬ್ಬರಿ ಒಂದು ಕೋಟಿ ರೂಪಾಯಿ. ಆದ್ರೆ ಭಾರತದಲ್ಲಿ ತಿಮಿಂಗಿಲದ ವಾಂತಿಯನ್ನು ಖರೀದಿ ಅಥವಾ ಮಾರಾಟ ಮಾಡದಂತೆ ನಿಷೇಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು