1:48 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕೇರಳ ಸಮುದ್ರದಲ್ಲಿ ಸಿಕ್ಕಿತು ತಿಮಿಂಗಿಲ ವಾಂತಿ!: ಇದರ ಬೆಲೆ ಬರೋಬ್ಬರಿ 28 ಕೋಟಿ!!

24/07/2022, 08:06

ತಿರುವನಂತಪುರ(reporterkarnataka.com) ಕೇರಳ ಸಮೀಪದ ವಿಝಿಂಜಂನಲ್ಲಿ ಮೀನುಗಾರರ ಗುಂಪು 28 ಕೋಟಿ ರೂಪಾಯಿ ಮೌಲ್ಯದ ತಿಮಿಂಗಿಲದ ಅಂಬರ್ ‌ಗ್ರಿಸ್ ಅಥವಾ ವಾಂತಿಯನ್ನು ಪತ್ತೆ ಮಾಡಿದೆ.

ತಿಮಿಂಗಿಲದ ಈ ವಾಂತಿ ಬರೋಬ್ಬರಿ 28 ಕೆಜಿ 400 ಗ್ರಾಂ ತೂಕವಿತ್ತು. ಮೀನುಗಾರರು ಸಮುದ್ರದ ದಡಕ್ಕೆ ಎಳೆದು ತಂದಿದ್ದಾರೆ. ಅದನ್ನು ಕೂಡಲೇ ಕರಾವಳಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಅಧಿಕಾರಿಗಳು ತಿಮಿಂಗಿಲ ಹೊರಹಾಕಿದ್ದನ್ನು ವಶಕ್ಕೆ ಪಡೆದಿದ್ದಾರೆ. ಅದು ತಿಮಿಂಗಿಲದ ವಾಂತಿ ಹೌದೋ ಅಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಲು ರಾಜೀವ್‌ ಗಾಂಧಿ ಸೆಂಟರ್‌ ಆಫ್‌ ಬಯಾಟೆಕ್ನಾಲಜಿಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ.

ತಿಮಿಂಗಿಲದ ವಾಂತಿಯನ್ನು ಸುಗಂಧ ದ್ರವ್ಯಗಳ ತಯಾರಿಕೆಗೆ ಬಳಸಲಾಗುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಕೆಜಿ ವಾಂತಿಯ ಬೆಲೆ ಬರೋಬ್ಬರಿ ಒಂದು ಕೋಟಿ ರೂಪಾಯಿ. ಆದ್ರೆ ಭಾರತದಲ್ಲಿ ತಿಮಿಂಗಿಲದ ವಾಂತಿಯನ್ನು ಖರೀದಿ ಅಥವಾ ಮಾರಾಟ ಮಾಡದಂತೆ ನಿಷೇಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು