7:06 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ

ಇತ್ತೀಚಿನ ಸುದ್ದಿ

ಕೇರಳ ಸ್ಫೋಟಕ್ಕೆ ಅತೀಯಾದ ತುಷ್ಟೀಕರಣದ ರಾಜಕಾರಣವೇ ಕಾರಣ: ಶಾಸಕ ಡಾ. ಭರತ್ ಶೆಟ್ಟಿ ಆಕ್ರೋಶ

29/10/2023, 20:08

ಮಂಗಳೂರು(reporter Karnataka.com): ಓಟು ಬ್ಯಾಂಕ್ ರಾಜಕಾರಣ ಹಾಗೂ ಅಲ್ಪಸಂಖ್ಯಾತ ಸಮುದಾಯದ ತುಷ್ಟೀಕರಣದ ಪರಿಣಾಮ ಕೇರಳದಲ್ಲಿ ಬಾಂಬ್ ಸ್ಫೋಟಕ್ಕೆ ಕಾರಣ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ. ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್, ಎಡಪಕ್ಷಗಳು ಹಾಗೂ ಮುಸ್ಲಿಂ ಲೀಗ್ ನಂತಹ ಪಕ್ಷಗಳು ಎಡಬಿಡಂಗಿ ನೀತಿಯನ್ನು ಇನ್ನಾದರೂ ನಿಲ್ಲಿಸಬೇಕು.ಕಣ್ಣಿದ್ದು ಕುರುಡನಂತೆ ವರ್ತಿಸಿದರೆ ಮತ್ತಷ್ಟು ಬಾಂಬ್ ಸ್ಫೋಟವಾಗುದು ಖಚಿತ.
ಕೇರಳ ಉಗ್ರರ ಸ್ಲೀಪರ್ ಸೆಲ್ ಆಗಿ ಪರಿವರ್ತನೆಯಾಗಿದ್ದು ದೇಶದ್ರೋಹಿ ಸಂಘಟನೆಗಳು ಇಲ್ಲಿಂದಲೇ ಕಾರ್ಯಾಚರಿಸುತ್ತಿವೆ.
ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಾಗ ಕೇರಳ ಲಿಂಕ್ ಕೇಳಿ ಬಂದಿತ್ತು.
ಇಷ್ಟೆಲ್ಲಾ ಅದರೂ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಉಗ್ರರ ಪರವಾದ ಹೇಳಿಕೆ ನೀಡುತ್ತಲೇ ಬಂದಿತ್ತು ಮಾತ್ರವಲ್ಲ.ರಾಜ್ಯದಲ್ಲಿ ಬೇರೆ ಬೇರೆ ಕಡೆ ನಡೆದ ಹಿಂಸಾಚಾರ ಪ್ರಕರಣದಲ್ಲಿ ಪಾಲ್ಗೊಂಡವರ ಮೇಲಿನ ಕೇಸು ಹಿಂಪಡೆಯಲೂ ಮುಂದಾಗಿದೆ.
ಇದೆಲ್ಲಾ ಜಿಹಾದಿ ಮನಸ್ಥಿತಿಯ ಕಿರಾತಕರು ಮತ್ತೆ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಮುಂದಾಗಿದ್ದಾರೆ ಎಂದರು.
ಪ್ರಕರಣದ ಕುರಿತು ಕೂಡಲೇ ಎನ್ ಐ ಎ ತನಿಖೆ ನಡೆಸಬೇಕು.
ಭಾರತ ಇಸ್ರೇಲ್ ಗೆ ಬೆಂಬಲ ನೀಡಿದ ಕಾರಣ ಸ್ಫೋಟವಾಯಿತೇ
ಎಂಬುದರ ಬಗ್ಗೆ ಕೂಲಂಕುಷ ತನಿಖೆ ಅಗತ್ಯ. ಈ ನಿಟ್ಟಿನಲ್ಲಿ ಇದರ ತನಿಖೆಯನ್ನು ಎನ್ ಐ ಗೆ ಒಪ್ಪಿಸಬೇಕು ಎಂದು ಹೇಳಿಕೆಯಲ್ಲಿ ಡಾ.ಭರತ್ ಶೆಟ್ಟಿ ವೈ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು