2:24 AM Tuesday29 - July 2025
ಬ್ರೇಕಿಂಗ್ ನ್ಯೂಸ್
Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ…

ಇತ್ತೀಚಿನ ಸುದ್ದಿ

ಕೇರಳ ಸ್ಫೋಟಕ್ಕೆ ಅತೀಯಾದ ತುಷ್ಟೀಕರಣದ ರಾಜಕಾರಣವೇ ಕಾರಣ: ಶಾಸಕ ಡಾ. ಭರತ್ ಶೆಟ್ಟಿ ಆಕ್ರೋಶ

29/10/2023, 20:08

ಮಂಗಳೂರು(reporter Karnataka.com): ಓಟು ಬ್ಯಾಂಕ್ ರಾಜಕಾರಣ ಹಾಗೂ ಅಲ್ಪಸಂಖ್ಯಾತ ಸಮುದಾಯದ ತುಷ್ಟೀಕರಣದ ಪರಿಣಾಮ ಕೇರಳದಲ್ಲಿ ಬಾಂಬ್ ಸ್ಫೋಟಕ್ಕೆ ಕಾರಣ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ. ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್, ಎಡಪಕ್ಷಗಳು ಹಾಗೂ ಮುಸ್ಲಿಂ ಲೀಗ್ ನಂತಹ ಪಕ್ಷಗಳು ಎಡಬಿಡಂಗಿ ನೀತಿಯನ್ನು ಇನ್ನಾದರೂ ನಿಲ್ಲಿಸಬೇಕು.ಕಣ್ಣಿದ್ದು ಕುರುಡನಂತೆ ವರ್ತಿಸಿದರೆ ಮತ್ತಷ್ಟು ಬಾಂಬ್ ಸ್ಫೋಟವಾಗುದು ಖಚಿತ.
ಕೇರಳ ಉಗ್ರರ ಸ್ಲೀಪರ್ ಸೆಲ್ ಆಗಿ ಪರಿವರ್ತನೆಯಾಗಿದ್ದು ದೇಶದ್ರೋಹಿ ಸಂಘಟನೆಗಳು ಇಲ್ಲಿಂದಲೇ ಕಾರ್ಯಾಚರಿಸುತ್ತಿವೆ.
ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಾಗ ಕೇರಳ ಲಿಂಕ್ ಕೇಳಿ ಬಂದಿತ್ತು.
ಇಷ್ಟೆಲ್ಲಾ ಅದರೂ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಉಗ್ರರ ಪರವಾದ ಹೇಳಿಕೆ ನೀಡುತ್ತಲೇ ಬಂದಿತ್ತು ಮಾತ್ರವಲ್ಲ.ರಾಜ್ಯದಲ್ಲಿ ಬೇರೆ ಬೇರೆ ಕಡೆ ನಡೆದ ಹಿಂಸಾಚಾರ ಪ್ರಕರಣದಲ್ಲಿ ಪಾಲ್ಗೊಂಡವರ ಮೇಲಿನ ಕೇಸು ಹಿಂಪಡೆಯಲೂ ಮುಂದಾಗಿದೆ.
ಇದೆಲ್ಲಾ ಜಿಹಾದಿ ಮನಸ್ಥಿತಿಯ ಕಿರಾತಕರು ಮತ್ತೆ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಮುಂದಾಗಿದ್ದಾರೆ ಎಂದರು.
ಪ್ರಕರಣದ ಕುರಿತು ಕೂಡಲೇ ಎನ್ ಐ ಎ ತನಿಖೆ ನಡೆಸಬೇಕು.
ಭಾರತ ಇಸ್ರೇಲ್ ಗೆ ಬೆಂಬಲ ನೀಡಿದ ಕಾರಣ ಸ್ಫೋಟವಾಯಿತೇ
ಎಂಬುದರ ಬಗ್ಗೆ ಕೂಲಂಕುಷ ತನಿಖೆ ಅಗತ್ಯ. ಈ ನಿಟ್ಟಿನಲ್ಲಿ ಇದರ ತನಿಖೆಯನ್ನು ಎನ್ ಐ ಗೆ ಒಪ್ಪಿಸಬೇಕು ಎಂದು ಹೇಳಿಕೆಯಲ್ಲಿ ಡಾ.ಭರತ್ ಶೆಟ್ಟಿ ವೈ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು