12:42 AM Saturday11 - July 2026
ಬ್ರೇಕಿಂಗ್ ನ್ಯೂಸ್
ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ…

ಇತ್ತೀಚಿನ ಸುದ್ದಿ

ಕೇರಳ ಸ್ಫೋಟಕ್ಕೆ ಅತೀಯಾದ ತುಷ್ಟೀಕರಣದ ರಾಜಕಾರಣವೇ ಕಾರಣ: ಶಾಸಕ ಡಾ. ಭರತ್ ಶೆಟ್ಟಿ ಆಕ್ರೋಶ

29/10/2023, 20:08

ಮಂಗಳೂರು(reporter Karnataka.com): ಓಟು ಬ್ಯಾಂಕ್ ರಾಜಕಾರಣ ಹಾಗೂ ಅಲ್ಪಸಂಖ್ಯಾತ ಸಮುದಾಯದ ತುಷ್ಟೀಕರಣದ ಪರಿಣಾಮ ಕೇರಳದಲ್ಲಿ ಬಾಂಬ್ ಸ್ಫೋಟಕ್ಕೆ ಕಾರಣ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ. ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್, ಎಡಪಕ್ಷಗಳು ಹಾಗೂ ಮುಸ್ಲಿಂ ಲೀಗ್ ನಂತಹ ಪಕ್ಷಗಳು ಎಡಬಿಡಂಗಿ ನೀತಿಯನ್ನು ಇನ್ನಾದರೂ ನಿಲ್ಲಿಸಬೇಕು.ಕಣ್ಣಿದ್ದು ಕುರುಡನಂತೆ ವರ್ತಿಸಿದರೆ ಮತ್ತಷ್ಟು ಬಾಂಬ್ ಸ್ಫೋಟವಾಗುದು ಖಚಿತ.
ಕೇರಳ ಉಗ್ರರ ಸ್ಲೀಪರ್ ಸೆಲ್ ಆಗಿ ಪರಿವರ್ತನೆಯಾಗಿದ್ದು ದೇಶದ್ರೋಹಿ ಸಂಘಟನೆಗಳು ಇಲ್ಲಿಂದಲೇ ಕಾರ್ಯಾಚರಿಸುತ್ತಿವೆ.
ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಾಗ ಕೇರಳ ಲಿಂಕ್ ಕೇಳಿ ಬಂದಿತ್ತು.
ಇಷ್ಟೆಲ್ಲಾ ಅದರೂ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಉಗ್ರರ ಪರವಾದ ಹೇಳಿಕೆ ನೀಡುತ್ತಲೇ ಬಂದಿತ್ತು ಮಾತ್ರವಲ್ಲ.ರಾಜ್ಯದಲ್ಲಿ ಬೇರೆ ಬೇರೆ ಕಡೆ ನಡೆದ ಹಿಂಸಾಚಾರ ಪ್ರಕರಣದಲ್ಲಿ ಪಾಲ್ಗೊಂಡವರ ಮೇಲಿನ ಕೇಸು ಹಿಂಪಡೆಯಲೂ ಮುಂದಾಗಿದೆ.
ಇದೆಲ್ಲಾ ಜಿಹಾದಿ ಮನಸ್ಥಿತಿಯ ಕಿರಾತಕರು ಮತ್ತೆ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಮುಂದಾಗಿದ್ದಾರೆ ಎಂದರು.
ಪ್ರಕರಣದ ಕುರಿತು ಕೂಡಲೇ ಎನ್ ಐ ಎ ತನಿಖೆ ನಡೆಸಬೇಕು.
ಭಾರತ ಇಸ್ರೇಲ್ ಗೆ ಬೆಂಬಲ ನೀಡಿದ ಕಾರಣ ಸ್ಫೋಟವಾಯಿತೇ
ಎಂಬುದರ ಬಗ್ಗೆ ಕೂಲಂಕುಷ ತನಿಖೆ ಅಗತ್ಯ. ಈ ನಿಟ್ಟಿನಲ್ಲಿ ಇದರ ತನಿಖೆಯನ್ನು ಎನ್ ಐ ಗೆ ಒಪ್ಪಿಸಬೇಕು ಎಂದು ಹೇಳಿಕೆಯಲ್ಲಿ ಡಾ.ಭರತ್ ಶೆಟ್ಟಿ ವೈ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು