7:34 PM Sunday21 - September 2025
ಬ್ರೇಕಿಂಗ್ ನ್ಯೂಸ್
ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ…

ಇತ್ತೀಚಿನ ಸುದ್ದಿ

ಕೇರಳದ ವಯನಾಡು ಪ್ರದೇಶದಲ್ಲಿ ಧಾರಾಕಾರ ಮಳೆ: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಮೈದುಂಬಿ ಹರಿಯುತ್ತಿರುವ ಕಪಿಲೆ; ಸ್ನಾನಘಟ್ಟ ಮುಳುಗಡೆ

16/07/2024, 17:51

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮಳೆ ಇಲ್ಲದೆ ಬಿರು ಬೇಸಿಗೆ ಬಿಸಿಲಿನಿಂದಾಗಿ ನೀರಿಲ್ಲದೆ ಬಣಗುಡುತ್ತಿದ್ದ ಕಪಿಲಾ ನದಿ ಈಗ ಕೇರಳದ ವಯನಾಡು ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನದಿಯಲ್ಲಿ ನೀರಿನ ಒಳ ಹರಿವು ಹೆಚ್ಚಾಗಿ ಮೈದುಂಬಿ ಹರಿಯುತ್ತಿದೆ.
ಕಳೆದ ನಾಲ್ಕಾರು ದಿನಗಳಿಂದ ನದಿ ಪ್ರಾಂತ್ಯದಲ್ಲಿ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆ ನದಿಯಲ್ಲಿ ಒಳಹರಿವು ಹೆಚ್ಚಾಗಿ ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಇದರಿಂದಾಗಿ ಕಬಿನಿ ಜಲಾಶಯದಿಂದ ನದಿಗೆ 30 ಸಾವಿರ ಕ್ಯೂಸೆಕ್ಸ್ ನೀರು ಹೊರ ಬಿಡಲಾಗಿದೆ.


ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಕಪಿಲಾನದಿ ಸ್ನಾನ ಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿದ್ದು ಐತಿಹಾಸಿಕ 16 ಕಾಲುಮಂಟಪ ಸಹ ಭಾಗಶಃ ಮುಳುಗಡೆಯಾಗಿದೆ.
ಕಪಿಲಾ ನದಿ ಸ್ನಾನಘಟ್ಟ ಮುಳುಗಡೆಯಾದ ಹಿನ್ನೆಲೆ
ಭಕ್ತಾದಿಗಳು ನದಿಗೆ ಇಳಿಯದಂತೆ ದೇವಾಲಯದ ವತಿಯಿಂದ ಮುಂಜಾಗ್ರತ ಕ್ರಮ ವಹಿಸಿ ಬ್ಯಾರಿಕೇಡ್ ಹಾಕಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿತ್ತು.
ಪ್ರವಾಹದಿಂದ ನದಿ ತುಂಬಿ ಹರಿಯುತ್ತಿರುವ ಸಂದರ್ಭದಲ್ಲಿ ಕೆಲವು ಭಕ್ತರು ಈಜಾಡುವ ಸಾಹಸ ಮಾಡುತ್ತಿದ್ದು, ವಿಶೇಷವಾಗಿತ್ತು.
ಮಳೆ ಇದೇ ರೀತಿ ಮುಂದುವರಿದರೆ ನದಿಯ ಪ್ರವಾಹ ಹೆಚ್ಚಾಗಿ ನದಿ ಪ್ರಾಂತ್ಯದ ತಗ್ಗು ಪ್ರದೇಶಗಳು ಮುಳುಗಡೆಯಾಗುವ ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು