2:13 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಕೇರಳದ ಟೊಮೆಟೋ ಜ್ವರ: ಕೊಡಗಿನಲ್ಲಿ ಮುನ್ನೆಚ್ಚರಿಕಾ ಕ್ರಮ; ಗಡಿಯಲ್ಲಿ ಕಟ್ಟುನಿಟ್ಟಿನ ಆರೋಗ್ಯ ತಪಾಸಣೆ

15/05/2022, 19:00

ಮಡಿಕೇರಿ(reporterkarnataka.com): ಕೇರಳದಲ್ಲಿ ಕಂಡು ಬಂದ ಟೊಮೆಟೋ ಜ್ವರದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರು ಆತಂಕ ಪಡುವ ಅಗತ್ಯವಿಲ್ಲವೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದಿಂದ ಕೊಡಗಿಗೆ ಬರುವ ವಾಹನಗಳನ್ನು ಗಡಿ ಭಾಗದಲ್ಲಿ ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ವಿಶೇಷ ತಂಡಗಳನ್ನು ನಿಯೋಜನೆ ಮಾಡಲಾಗಿದೆ ಎಂದರು.

ಟೊಮೆಟೋ ಜ್ವರ 5 ವರ್ಷದ ಒಳಗಿನ ಮಕ್ಕಳಲ್ಲಿ ಕಂಡು ಬರುತ್ತಿದ್ದು, ಕೋವಿಡ್‍ಗೂ ಟೊಮೆಟೋ ಜ್ವರಕ್ಕೂ ಯಾವುದೇ ಸಂಬಂಧವಿಲ್ಲ. ಇದುವರೆಗೂ ಕೊಡಗಿನಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ಕೊಡಗಿಗೆ ಸಾಕಷ್ಟು ಪ್ರವಾಸಿಗರು ಬರುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯ ಜನ ಎಚ್ಚರ ವಹಿಸಬೇಕು. ಈಗಾಗಲೇ ತಾಲೂಕು ವೈದ್ಯಾಧಿಕಾರಿಗಳಿಗೂ ಜವಾಬ್ದಾರಿಯನ್ನು ನೀಡಲಾಗಿದೆ. ಐದು ವರ್ಷದೊಳಗಿನ ಮಕ್ಕಳಲ್ಲಿ ಮೈ-ಕೈ ನೋವು, ಜ್ವರ, ಚರ್ಮದಲ್ಲಿ ಗುಳ್ಳೆಗಳು ಕಂಡು ಬಂದಲ್ಲಿ ಮಾಹಿತಿ ನೀಡುವಂತೆ ಡಾ.ಆರ್.ವೆಂಕಟೇಶ್ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು