4:34 AM Friday19 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಕೇರಳದಲ್ಲಿ ಸ್ಫೋಟ: ಕರ್ನಾಟಕ ಗಡಿಯಲ್ಲಿ ನಿಗಾ ಇಡಲು ಪೊಲೀಸ್ ಇಲಾಖೆಗೆ ಗೃಹ ಸಚಿವ ಡಾ. ಪರಮೇಶ್ವರ್ ಸೂಚನೆ

29/10/2023, 17:19

ಮಂಗಳೂರು(reporterkarnataka.com): ಕೇರಳದಲ್ಲಿ ನಡೆದ ಸರಣಿ ಸ್ಫೋಟದ ಹಿನ್ನೆಲೆಯಲ್ಲಿ ಕೇರಳ- ಕರ್ನಾಟಕ ಗಡಿ ಪ್ರದೇಶದಲ್ಲಿ ಎಚ್ಚರ ವಹಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ನಗರದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಗಡಿಯಲ್ಲಿ ನಿಗಾ ಇಡಲು ಡಿಜಿ, ಐಜಿಯವರಿಗೆ ಸೂಚನೆ ನೀಡಲಾಗಿದೆ. ದಸರಾ ಸಂದರ್ಭದಲ್ಲಿ ಮಂಗಳೂರು, ಕೊಡಗು ಮತ್ತು ಮೈಸೂರಿನಲ್ಲಿ ಬೆದರಿಕೆ ಬಂದಿತ್ತು. ಆ ಮೂರು ಕಡೆಗಳಲ್ಲೂ ಸೂಕ್ತ ಕ್ರಮ ಕೈಗೊಳ್ಳಲಾಗಿತ್ತು ಎಂದು ಅವರು ನುಡಿದರು.
ರಾಜ್ಯ ಪೊಲೀಸ್ ಇಲಾಖೆಯಲ್ಲಿ 18 ಸಾವಿರ ಕಾನ್ ಸ್ಟೇಬಲ್ ಹುದ್ದೆ ಖಾಲಿ ಇದೆ. ಕಳೆದ 4-5 ವರ್ಷಗಳಿಂದ ಹೊಸ ನೇಮಕಾತಿ ನಡೆದಿಲ್ಲ. ಸಬ್ ಇನ್ಸ್ ಪೆಕ್ಟರ್ ಹುದ್ದೆ ಕೂಡ ಖಾಲಿ ಇದೆ. ಆದರೆ ಪಿಎಸ್ ಐ ನೇಮಕಾತಿ ಹಗರಣ ನ್ಯಾಯಾಲಯದಲ್ಲಿದೆ. ಸರಕಾರದ ಅಭಿಪ್ರಾಯವನ್ನು ಕೋರ್ಟ್ ಗೆ ತಿಳಿಸಲಾಗಿದೆ. ಆದರೆ, ನ್ಯಾಯಾಲಯ ಏನು ತೀರ್ಪು ನೀಡುತ್ತದೆ ಎಂಬುದನ್ನು ಕಾಯುತ್ತಿದ್ದೇವೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು