8:59 PM Friday12 - December 2025
ಬ್ರೇಕಿಂಗ್ ನ್ಯೂಸ್
ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ

ಇತ್ತೀಚಿನ ಸುದ್ದಿ

ಕೇರಳದಲ್ಲಿ ವಾರಾಂತ್ಯ ಲಾಕ್‌ಡೌನ್‌ ಭಾನುವಾರಕ್ಕೆ ಮಾತ್ರ ಸೀಮಿತ: ಆ.15 ಮತ್ತು 22ರಂದು ಸ್ವಾತಂತ್ರ್ಯೋತ್ಸವ, ಓಣಂಗೆ ಓಪನ್

05/08/2021, 12:39

ತಿರುವನಂತಪುರ(reporterkarnataka.com): ಕೇರಳದಲ್ಲಿ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಲಾಗಿದ್ದು, ವಾರಾಂತ್ಯ ಸಂಪೂರ್ಣ ಲಾಕ್ ಡೌನ್ ನ್ನು ಭಾನುವಾರ ಒಂದೇ ದಿನಕ್ಕೆ ಸೀಮಿತಗೊಳಿಸಲಾಗಿದೆ. 

ಎಲ್ಲ ವ್ಯಾಪಾರ ಮಳಿಗೆಗಳನ್ನು ಸೋಮವಾರದಿಂದ ಶನಿವಾರ ತನಕ ಬೆಳಗ್ಗೆ 7ರಿಂದ ರಾತ್ರಿ 9ರ ತನಕ ತೆರೆಯಲು ಅವಕಾಶ ನೀಡಲಾಗಿದೆ. ಜತೆಗೆ ಆಗಸ್ಟ್‌ 15ರಂದು ಹಾಗೂ ಆಗಸ್ಟ್‌ 22ರಂದು ವಾರಾಂತ್ಯ ಲಾಕ್‌ಡೌನ್‌ನಿಂದ ವಿನಾಯಿತಿ ನೀಡಲಾಗಿದೆ.

ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಕೇರಳ ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ.

ಸ್ವಾತಂತ್ರ್ಯ ದಿನವಾದ ಆಗಸ್ಟ್ 15ರಂದು ಹಾಗೂ ಓಣಂ ಹಿನ್ನಲೆಯಲ್ಲಿ ಆಗಸ್ಟ್ 22ರಂದು ಭಾನುವಾರ

ಆಗಿರುವುದರಿಂದ ಅಂದು ವಾರಾಂತ್ಯ ಲಾಕ್ ಡೌನ್ ನಿಂದ ವಿನಾಯಿತಿ ನೀಡಲಾಗಿದ್ದು, ವ್ಯಾಪಾರ ಮಳಿಗೆಗಳನ್ನು ತೆರೆಯಬಹುದಾಗಿದೆ.

ಪ್ರಾರ್ಥನಾ ಮಂದಿರಗಳಲ್ಲಿ ವಿಸ್ತೀರ್ಣದ ಆಧಾರದಲ್ಲಿ ಭಕ್ತರಿಗೆ ಪ್ರವೇಶ ನೀಡಲಾಗುವುದು. ಒಂದು ಬಾರಿ 40 ಮಂದಿಗೆ ಮಾತ್ರ ಅವಕಾಶ. ವಿವಾಹ ಹಾಗೂ ಅಂತ್ಯಕ್ರಿಯೆ ಹಾಗೂ ಮರಣಾನಂತರ ಕಾರ್ಯಕ್ರಮಕ್ಕೆ ತಲಾ 20 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆದರೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಕ್ಕೆ ಅವಕಾಶ ಇಲ್ಲ. ಹಬ್ಬದ ದಿನಗಳಲ್ಲಿ ಸುರಕ್ಷಿತ ಅಂತರ ಕಾಯ್ದುಕೊಂಡು ಕೋವಿಡ್ ಮಾನದಂಡ ಪಾಲಿಸಬೇಕು ಎಮದು ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು