11:36 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕೇರಳದಲ್ಲಿ ವಾರಾಂತ್ಯ ಲಾಕ್‌ಡೌನ್‌ ಭಾನುವಾರಕ್ಕೆ ಮಾತ್ರ ಸೀಮಿತ: ಆ.15 ಮತ್ತು 22ರಂದು ಸ್ವಾತಂತ್ರ್ಯೋತ್ಸವ, ಓಣಂಗೆ ಓಪನ್

05/08/2021, 12:39

ತಿರುವನಂತಪುರ(reporterkarnataka.com): ಕೇರಳದಲ್ಲಿ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಲಾಗಿದ್ದು, ವಾರಾಂತ್ಯ ಸಂಪೂರ್ಣ ಲಾಕ್ ಡೌನ್ ನ್ನು ಭಾನುವಾರ ಒಂದೇ ದಿನಕ್ಕೆ ಸೀಮಿತಗೊಳಿಸಲಾಗಿದೆ. 

ಎಲ್ಲ ವ್ಯಾಪಾರ ಮಳಿಗೆಗಳನ್ನು ಸೋಮವಾರದಿಂದ ಶನಿವಾರ ತನಕ ಬೆಳಗ್ಗೆ 7ರಿಂದ ರಾತ್ರಿ 9ರ ತನಕ ತೆರೆಯಲು ಅವಕಾಶ ನೀಡಲಾಗಿದೆ. ಜತೆಗೆ ಆಗಸ್ಟ್‌ 15ರಂದು ಹಾಗೂ ಆಗಸ್ಟ್‌ 22ರಂದು ವಾರಾಂತ್ಯ ಲಾಕ್‌ಡೌನ್‌ನಿಂದ ವಿನಾಯಿತಿ ನೀಡಲಾಗಿದೆ.

ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಕೇರಳ ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ.

ಸ್ವಾತಂತ್ರ್ಯ ದಿನವಾದ ಆಗಸ್ಟ್ 15ರಂದು ಹಾಗೂ ಓಣಂ ಹಿನ್ನಲೆಯಲ್ಲಿ ಆಗಸ್ಟ್ 22ರಂದು ಭಾನುವಾರ

ಆಗಿರುವುದರಿಂದ ಅಂದು ವಾರಾಂತ್ಯ ಲಾಕ್ ಡೌನ್ ನಿಂದ ವಿನಾಯಿತಿ ನೀಡಲಾಗಿದ್ದು, ವ್ಯಾಪಾರ ಮಳಿಗೆಗಳನ್ನು ತೆರೆಯಬಹುದಾಗಿದೆ.

ಪ್ರಾರ್ಥನಾ ಮಂದಿರಗಳಲ್ಲಿ ವಿಸ್ತೀರ್ಣದ ಆಧಾರದಲ್ಲಿ ಭಕ್ತರಿಗೆ ಪ್ರವೇಶ ನೀಡಲಾಗುವುದು. ಒಂದು ಬಾರಿ 40 ಮಂದಿಗೆ ಮಾತ್ರ ಅವಕಾಶ. ವಿವಾಹ ಹಾಗೂ ಅಂತ್ಯಕ್ರಿಯೆ ಹಾಗೂ ಮರಣಾನಂತರ ಕಾರ್ಯಕ್ರಮಕ್ಕೆ ತಲಾ 20 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆದರೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಕ್ಕೆ ಅವಕಾಶ ಇಲ್ಲ. ಹಬ್ಬದ ದಿನಗಳಲ್ಲಿ ಸುರಕ್ಷಿತ ಅಂತರ ಕಾಯ್ದುಕೊಂಡು ಕೋವಿಡ್ ಮಾನದಂಡ ಪಾಲಿಸಬೇಕು ಎಮದು ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು