8:43 PM Sunday19 - April 2026
ಬ್ರೇಕಿಂಗ್ ನ್ಯೂಸ್
ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು…

ಇತ್ತೀಚಿನ ಸುದ್ದಿ

ಕೇರಳದಲ್ಲಿ ವಾರಾಂತ್ಯ ಲಾಕ್‌ಡೌನ್‌ ಭಾನುವಾರಕ್ಕೆ ಮಾತ್ರ ಸೀಮಿತ: ಆ.15 ಮತ್ತು 22ರಂದು ಸ್ವಾತಂತ್ರ್ಯೋತ್ಸವ, ಓಣಂಗೆ ಓಪನ್

05/08/2021, 12:39

ತಿರುವನಂತಪುರ(reporterkarnataka.com): ಕೇರಳದಲ್ಲಿ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಲಾಗಿದ್ದು, ವಾರಾಂತ್ಯ ಸಂಪೂರ್ಣ ಲಾಕ್ ಡೌನ್ ನ್ನು ಭಾನುವಾರ ಒಂದೇ ದಿನಕ್ಕೆ ಸೀಮಿತಗೊಳಿಸಲಾಗಿದೆ. 

ಎಲ್ಲ ವ್ಯಾಪಾರ ಮಳಿಗೆಗಳನ್ನು ಸೋಮವಾರದಿಂದ ಶನಿವಾರ ತನಕ ಬೆಳಗ್ಗೆ 7ರಿಂದ ರಾತ್ರಿ 9ರ ತನಕ ತೆರೆಯಲು ಅವಕಾಶ ನೀಡಲಾಗಿದೆ. ಜತೆಗೆ ಆಗಸ್ಟ್‌ 15ರಂದು ಹಾಗೂ ಆಗಸ್ಟ್‌ 22ರಂದು ವಾರಾಂತ್ಯ ಲಾಕ್‌ಡೌನ್‌ನಿಂದ ವಿನಾಯಿತಿ ನೀಡಲಾಗಿದೆ.

ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಕೇರಳ ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ.

ಸ್ವಾತಂತ್ರ್ಯ ದಿನವಾದ ಆಗಸ್ಟ್ 15ರಂದು ಹಾಗೂ ಓಣಂ ಹಿನ್ನಲೆಯಲ್ಲಿ ಆಗಸ್ಟ್ 22ರಂದು ಭಾನುವಾರ

ಆಗಿರುವುದರಿಂದ ಅಂದು ವಾರಾಂತ್ಯ ಲಾಕ್ ಡೌನ್ ನಿಂದ ವಿನಾಯಿತಿ ನೀಡಲಾಗಿದ್ದು, ವ್ಯಾಪಾರ ಮಳಿಗೆಗಳನ್ನು ತೆರೆಯಬಹುದಾಗಿದೆ.

ಪ್ರಾರ್ಥನಾ ಮಂದಿರಗಳಲ್ಲಿ ವಿಸ್ತೀರ್ಣದ ಆಧಾರದಲ್ಲಿ ಭಕ್ತರಿಗೆ ಪ್ರವೇಶ ನೀಡಲಾಗುವುದು. ಒಂದು ಬಾರಿ 40 ಮಂದಿಗೆ ಮಾತ್ರ ಅವಕಾಶ. ವಿವಾಹ ಹಾಗೂ ಅಂತ್ಯಕ್ರಿಯೆ ಹಾಗೂ ಮರಣಾನಂತರ ಕಾರ್ಯಕ್ರಮಕ್ಕೆ ತಲಾ 20 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆದರೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಕ್ಕೆ ಅವಕಾಶ ಇಲ್ಲ. ಹಬ್ಬದ ದಿನಗಳಲ್ಲಿ ಸುರಕ್ಷಿತ ಅಂತರ ಕಾಯ್ದುಕೊಂಡು ಕೋವಿಡ್ ಮಾನದಂಡ ಪಾಲಿಸಬೇಕು ಎಮದು ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು