11:31 AM Thursday20 - November 2025
ಬ್ರೇಕಿಂಗ್ ನ್ಯೂಸ್
ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌…

ಇತ್ತೀಚಿನ ಸುದ್ದಿ

ಕೇರಳದಲ್ಲಿ ವಾರಾಂತ್ಯ ಲಾಕ್‌ಡೌನ್‌ ಭಾನುವಾರಕ್ಕೆ ಮಾತ್ರ ಸೀಮಿತ: ಆ.15 ಮತ್ತು 22ರಂದು ಸ್ವಾತಂತ್ರ್ಯೋತ್ಸವ, ಓಣಂಗೆ ಓಪನ್

05/08/2021, 12:39

ತಿರುವನಂತಪುರ(reporterkarnataka.com): ಕೇರಳದಲ್ಲಿ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಲಾಗಿದ್ದು, ವಾರಾಂತ್ಯ ಸಂಪೂರ್ಣ ಲಾಕ್ ಡೌನ್ ನ್ನು ಭಾನುವಾರ ಒಂದೇ ದಿನಕ್ಕೆ ಸೀಮಿತಗೊಳಿಸಲಾಗಿದೆ. 

ಎಲ್ಲ ವ್ಯಾಪಾರ ಮಳಿಗೆಗಳನ್ನು ಸೋಮವಾರದಿಂದ ಶನಿವಾರ ತನಕ ಬೆಳಗ್ಗೆ 7ರಿಂದ ರಾತ್ರಿ 9ರ ತನಕ ತೆರೆಯಲು ಅವಕಾಶ ನೀಡಲಾಗಿದೆ. ಜತೆಗೆ ಆಗಸ್ಟ್‌ 15ರಂದು ಹಾಗೂ ಆಗಸ್ಟ್‌ 22ರಂದು ವಾರಾಂತ್ಯ ಲಾಕ್‌ಡೌನ್‌ನಿಂದ ವಿನಾಯಿತಿ ನೀಡಲಾಗಿದೆ.

ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಕೇರಳ ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ.

ಸ್ವಾತಂತ್ರ್ಯ ದಿನವಾದ ಆಗಸ್ಟ್ 15ರಂದು ಹಾಗೂ ಓಣಂ ಹಿನ್ನಲೆಯಲ್ಲಿ ಆಗಸ್ಟ್ 22ರಂದು ಭಾನುವಾರ

ಆಗಿರುವುದರಿಂದ ಅಂದು ವಾರಾಂತ್ಯ ಲಾಕ್ ಡೌನ್ ನಿಂದ ವಿನಾಯಿತಿ ನೀಡಲಾಗಿದ್ದು, ವ್ಯಾಪಾರ ಮಳಿಗೆಗಳನ್ನು ತೆರೆಯಬಹುದಾಗಿದೆ.

ಪ್ರಾರ್ಥನಾ ಮಂದಿರಗಳಲ್ಲಿ ವಿಸ್ತೀರ್ಣದ ಆಧಾರದಲ್ಲಿ ಭಕ್ತರಿಗೆ ಪ್ರವೇಶ ನೀಡಲಾಗುವುದು. ಒಂದು ಬಾರಿ 40 ಮಂದಿಗೆ ಮಾತ್ರ ಅವಕಾಶ. ವಿವಾಹ ಹಾಗೂ ಅಂತ್ಯಕ್ರಿಯೆ ಹಾಗೂ ಮರಣಾನಂತರ ಕಾರ್ಯಕ್ರಮಕ್ಕೆ ತಲಾ 20 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆದರೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಕ್ಕೆ ಅವಕಾಶ ಇಲ್ಲ. ಹಬ್ಬದ ದಿನಗಳಲ್ಲಿ ಸುರಕ್ಷಿತ ಅಂತರ ಕಾಯ್ದುಕೊಂಡು ಕೋವಿಡ್ ಮಾನದಂಡ ಪಾಲಿಸಬೇಕು ಎಮದು ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು