6:44 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಕೇರಳದಲ್ಲಿ ವಾರಾಂತ್ಯ ಲಾಕ್‌ಡೌನ್‌ ಭಾನುವಾರಕ್ಕೆ ಮಾತ್ರ ಸೀಮಿತ: ಆ.15 ಮತ್ತು 22ರಂದು ಸ್ವಾತಂತ್ರ್ಯೋತ್ಸವ, ಓಣಂಗೆ ಓಪನ್

05/08/2021, 12:39

ತಿರುವನಂತಪುರ(reporterkarnataka.com): ಕೇರಳದಲ್ಲಿ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಲಾಗಿದ್ದು, ವಾರಾಂತ್ಯ ಸಂಪೂರ್ಣ ಲಾಕ್ ಡೌನ್ ನ್ನು ಭಾನುವಾರ ಒಂದೇ ದಿನಕ್ಕೆ ಸೀಮಿತಗೊಳಿಸಲಾಗಿದೆ. 

ಎಲ್ಲ ವ್ಯಾಪಾರ ಮಳಿಗೆಗಳನ್ನು ಸೋಮವಾರದಿಂದ ಶನಿವಾರ ತನಕ ಬೆಳಗ್ಗೆ 7ರಿಂದ ರಾತ್ರಿ 9ರ ತನಕ ತೆರೆಯಲು ಅವಕಾಶ ನೀಡಲಾಗಿದೆ. ಜತೆಗೆ ಆಗಸ್ಟ್‌ 15ರಂದು ಹಾಗೂ ಆಗಸ್ಟ್‌ 22ರಂದು ವಾರಾಂತ್ಯ ಲಾಕ್‌ಡೌನ್‌ನಿಂದ ವಿನಾಯಿತಿ ನೀಡಲಾಗಿದೆ.

ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಕೇರಳ ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ.

ಸ್ವಾತಂತ್ರ್ಯ ದಿನವಾದ ಆಗಸ್ಟ್ 15ರಂದು ಹಾಗೂ ಓಣಂ ಹಿನ್ನಲೆಯಲ್ಲಿ ಆಗಸ್ಟ್ 22ರಂದು ಭಾನುವಾರ

ಆಗಿರುವುದರಿಂದ ಅಂದು ವಾರಾಂತ್ಯ ಲಾಕ್ ಡೌನ್ ನಿಂದ ವಿನಾಯಿತಿ ನೀಡಲಾಗಿದ್ದು, ವ್ಯಾಪಾರ ಮಳಿಗೆಗಳನ್ನು ತೆರೆಯಬಹುದಾಗಿದೆ.

ಪ್ರಾರ್ಥನಾ ಮಂದಿರಗಳಲ್ಲಿ ವಿಸ್ತೀರ್ಣದ ಆಧಾರದಲ್ಲಿ ಭಕ್ತರಿಗೆ ಪ್ರವೇಶ ನೀಡಲಾಗುವುದು. ಒಂದು ಬಾರಿ 40 ಮಂದಿಗೆ ಮಾತ್ರ ಅವಕಾಶ. ವಿವಾಹ ಹಾಗೂ ಅಂತ್ಯಕ್ರಿಯೆ ಹಾಗೂ ಮರಣಾನಂತರ ಕಾರ್ಯಕ್ರಮಕ್ಕೆ ತಲಾ 20 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆದರೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಕ್ಕೆ ಅವಕಾಶ ಇಲ್ಲ. ಹಬ್ಬದ ದಿನಗಳಲ್ಲಿ ಸುರಕ್ಷಿತ ಅಂತರ ಕಾಯ್ದುಕೊಂಡು ಕೋವಿಡ್ ಮಾನದಂಡ ಪಾಲಿಸಬೇಕು ಎಮದು ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು