12:32 AM Friday5 - June 2026
ಬ್ರೇಕಿಂಗ್ ನ್ಯೂಸ್
ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌

ಇತ್ತೀಚಿನ ಸುದ್ದಿ

ಕೇರಳದಲ್ಲಿ ವಾರಾಂತ್ಯ ಲಾಕ್‌ಡೌನ್‌ ಭಾನುವಾರಕ್ಕೆ ಮಾತ್ರ ಸೀಮಿತ: ಆ.15 ಮತ್ತು 22ರಂದು ಸ್ವಾತಂತ್ರ್ಯೋತ್ಸವ, ಓಣಂಗೆ ಓಪನ್

05/08/2021, 12:39

ತಿರುವನಂತಪುರ(reporterkarnataka.com): ಕೇರಳದಲ್ಲಿ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಲಾಗಿದ್ದು, ವಾರಾಂತ್ಯ ಸಂಪೂರ್ಣ ಲಾಕ್ ಡೌನ್ ನ್ನು ಭಾನುವಾರ ಒಂದೇ ದಿನಕ್ಕೆ ಸೀಮಿತಗೊಳಿಸಲಾಗಿದೆ. 

ಎಲ್ಲ ವ್ಯಾಪಾರ ಮಳಿಗೆಗಳನ್ನು ಸೋಮವಾರದಿಂದ ಶನಿವಾರ ತನಕ ಬೆಳಗ್ಗೆ 7ರಿಂದ ರಾತ್ರಿ 9ರ ತನಕ ತೆರೆಯಲು ಅವಕಾಶ ನೀಡಲಾಗಿದೆ. ಜತೆಗೆ ಆಗಸ್ಟ್‌ 15ರಂದು ಹಾಗೂ ಆಗಸ್ಟ್‌ 22ರಂದು ವಾರಾಂತ್ಯ ಲಾಕ್‌ಡೌನ್‌ನಿಂದ ವಿನಾಯಿತಿ ನೀಡಲಾಗಿದೆ.

ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಕೇರಳ ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ.

ಸ್ವಾತಂತ್ರ್ಯ ದಿನವಾದ ಆಗಸ್ಟ್ 15ರಂದು ಹಾಗೂ ಓಣಂ ಹಿನ್ನಲೆಯಲ್ಲಿ ಆಗಸ್ಟ್ 22ರಂದು ಭಾನುವಾರ

ಆಗಿರುವುದರಿಂದ ಅಂದು ವಾರಾಂತ್ಯ ಲಾಕ್ ಡೌನ್ ನಿಂದ ವಿನಾಯಿತಿ ನೀಡಲಾಗಿದ್ದು, ವ್ಯಾಪಾರ ಮಳಿಗೆಗಳನ್ನು ತೆರೆಯಬಹುದಾಗಿದೆ.

ಪ್ರಾರ್ಥನಾ ಮಂದಿರಗಳಲ್ಲಿ ವಿಸ್ತೀರ್ಣದ ಆಧಾರದಲ್ಲಿ ಭಕ್ತರಿಗೆ ಪ್ರವೇಶ ನೀಡಲಾಗುವುದು. ಒಂದು ಬಾರಿ 40 ಮಂದಿಗೆ ಮಾತ್ರ ಅವಕಾಶ. ವಿವಾಹ ಹಾಗೂ ಅಂತ್ಯಕ್ರಿಯೆ ಹಾಗೂ ಮರಣಾನಂತರ ಕಾರ್ಯಕ್ರಮಕ್ಕೆ ತಲಾ 20 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆದರೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಕ್ಕೆ ಅವಕಾಶ ಇಲ್ಲ. ಹಬ್ಬದ ದಿನಗಳಲ್ಲಿ ಸುರಕ್ಷಿತ ಅಂತರ ಕಾಯ್ದುಕೊಂಡು ಕೋವಿಡ್ ಮಾನದಂಡ ಪಾಲಿಸಬೇಕು ಎಮದು ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು