1:14 PM Sunday8 - February 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7…

ಇತ್ತೀಚಿನ ಸುದ್ದಿ

ಕೇರಳದಲ್ಲಿ ಅಬ್ಬರದ ಪೂರ್ವ ಮುಂಗಾರು ವರ್ಷಧಾರೆ: ಕೊಚ್ಚಿಯ ಐಟಿ ಟೆಕ್ ಪಾರ್ಕ್ ಜಲಾವೃತ, ಗುರುವಾಯೂರು ದೇಗುಲಕ್ಕೂ ನೀರು

23/05/2024, 13:03

ತಿರುವನಂತಪುರಂ(reporterkarnataka.com):ಕೇರಳಕ್ಕೆ ಜೂನ್ 1ರಂದು ಮುಂಗಾರು ಆಗಮಿಸಲಿದ್ದು, ಪೂರ್ವ ಮುಂಗಾರು ಹಿನ್ನೆಲೆಯಲ್ಲಿ ಮುಂದಿನ 24 ಗಂಟೆ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
ಕೇರಳದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್, 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮಧ್ಯ ಮತ್ತು ಉತ್ತರ ಕೇರಳದಾದ್ಯಂತ ಭಾರೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪೂರ್ವ ಮುಂಗಾರು ಅಬ್ಬರ ಕೇರಳದಲ್ಲಿ ಈಗಾಗಲೇ ಜೋರಾಗಿದ್ದು, ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಕೊಚ್ಚಿಯ ಐಟಿ ಟೆಕ್ ಪಾರ್ಕ್ ಜಲಾವೃತ ಗೊಂಡಿದೆ. ಆಫೀಸ್ ಒಳಭಾಗದಲ್ಲಿ ನೀರು ನಿಂತಿದ್ದು, ಪರಿಣಾಮ ಟೆಕ್ಕಿಗಳು ಪರದಾಡಿದ್ದಾರೆ. ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದ ಮುಂಭಾಗ ಕೂಡ ಜಲಾವೃತವಾಗಿದೆ. ಅಂಗಡಿಗಳಿಗೂ ನೀರು ನುಗ್ಗಿ ಅಸ್ತವ್ಯಸ್ತವಾಗಿತ್ತು.
ಪಾಲಕ್ಕಾಡ್ ಕಲ್ಲಡಿಕೋಡ್ ಎಂಬಲ್ಲಿ ಸಿಡಿಲು ಬಡಿದು ಮನೆಯ ಮೇಲ್ಛಾವಣಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಕರಿಂಬಾ ಅಯ್ಯಪ್ಪನಕೋಟ ಮಂಪುರಂ ನಿವಾಸಿ ಕಣ್ಣನ್ ಎಂಬವರ ಮನೆ ಬೆಂಕಿಗೆ ಆಹುತಿಯಾಗಿದೆ. ಮಂಪುರಂ ಮೂಲದ ರೆಗಿ ಮತ್ತು ಅವರ ಕುಟುಂಬ ಬಾಡಿಗೆಗೆ ಈ ಮನೆಯಲ್ಲಿ ವಾಸವಾಗಿದ್ದಾರೆ. ಮನೆಯಲ್ಲಿದ್ದ ಕಪಾಟುಗಳು, ಬೆಡ್‍ಗಳು ಇತ್ಯಾದಿಗಳು ಸುಟ್ಟು ಹೋಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು