11:37 PM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಕೇರಳ ಸರಕಾರ ಹಾಗೂ ರಾಜ್ಯಪಾಲರ ನಡುವೆ ಶೀತಲ ಸಮರ: 11 ಸುಗ್ರೀವಾಜ್ಞೆಗಳಿಗೆ ಸಹಿ ಹಾಕದೆ ವಾಪಸ್

11/08/2022, 10:46

ತಿರುವನಂತಪುರ(reporterkarnataka.com);ಕೇರಳ ರಾಜ್ಯಪಾಲರು 11 ಸುಗ್ರೀವಾಜ್ಞೆಗಳಿಗೆ ಸಹಿ ಹಾಕದೆ ವಾಪಸ್ ಕಳುಹಿಸುವುದರೊಂದಿಗೆ ಕೇರಳದಲ್ಲಿ ಸರಕಾರ ಮತ್ತು ರಾಜ್ಯಪಾಲ ಆರೀಫ್​ ಮೊಹಮ್ಮದ್​ ಖಾನ್​ ನಡುವೆ ಶೀತಲ ಸಮರ ಮುಂದುವರಿದಿದೆ. ಇದರೊಂದಿಗೆ ವಿಶೇಷ ಅಧಿವೇಶನಕ್ಕೆ ಕೇರಳ ಸರಕಾರ ಮೊರೆ ಹೋಗಿದೆ.

ರಾಜ್ಯಪಾಲರ ಅಂಕಿತ ಸಿಗದ ಹಿನ್ನೆಲೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಇವುಗಳನ್ನು ಪಾಸ್​ ಮಾಡಿಕೊಳ್ಳಲೆಂದೇ​ ವಿಶೇಷ ಅಧಿವೇಶನ ಕರೆದಿದೆ.

ಎರಡು ದಿನಗಳ ಹಿಂದೆ ರಾಜ್ಯಪಾಲರ ಅಂಕಿತಕ್ಕಾಗಿ ಸರ್ಕಾರ ಸುಗ್ರೀವಾಜ್ಞೆಗಳನ್ನು ಕಳುಹಿಸಲಾಗಿತ್ತು. ಆದರೆ, ರಾಜ್ಯಪಾಲ ಯಾವುದೇ ದಾಖಲೆಗಳನ್ನು ಓದದೆ ಸಹಿ ಹಾಕಲು ನಿರಾಕರಿಸಿದ್ದರು. ಹೀಗಾಗಿಯೇ ಮರು ಪ್ರಕಟಣೆಯಾಗಬೇಕಿದ್ದ ಸುಗ್ರೀವಾಜ್ಞೆಗಳು ರದ್ದಾಗಿವೆ.

ಇದೀಗ ರಾಜ್ಯಪಾಲರಿಗೆ ಸೆಡ್ಡು ಹೊಡೆದಿರುವ ಪಿಣರಾಯಿ ಸರ್ಕಾರ ಸಚಿವ ಸಂಪುಟ ಸಭೆ ಕರೆದು, 10 ದಿನಗಳ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಿದೆ. ಈ ಅಧಿವೇಶನದಲ್ಲಿ ಮಸೂದೆಗಳನ್ನು ಮಂಡಿಸಿ ಸದನದಲ್ಲೇ ಅಂಗೀಕಾರ ಪಡೆಯುವ ಉದ್ದೇಶ ಸರ್ಕಾರದ್ದು. 140 ಸದಸ್ಯ ಬಲದ ವಿಧಾನಸಭೆಯಲ್ಲಿ 99 ಸದಸ್ಯರು ಆಡಳಿತಾರೂಢ ಎಡಪಕ್ಷಗಳಿಗೆ ಸೇರಿದ್ದು, ಈ ಎಲ್ಲ ಮಸೂದೆಗಳು ಕ್ಷಣಾರ್ಧದಲ್ಲಿ ಅಂಗೀಕಾರಗೊಳ್ಳುವ ನಿರೀಕ್ಷೆ ಇದೆ.

ಇತ್ತ, ಅಧಿವೇಶನ ನಡೆಸುವ ಬಗ್ಗೆ ರಾಜ್ಯಪಾಲರಿಗೆ 14 ದಿನಗಳು ಮುಂಚಿತವಾಗಿ ನೋಟಿಸ್​ ನೀಡಬೇಕು. ಹೀಗಾಗಿಯೇ ಸ್ಪೀಕರ್​ ಜೊತೆ ಚರ್ಚಿಸಿ ಸರ್ಕಾರ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡಲಿದೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು