12:23 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕೇರ್ಪಡದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಪ್ರಾರಂಭ: 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾವಣೆ

21/10/2024, 11:49

ಪುತ್ತೂರು(reporterkarnataka.com): ಕೇರ್ಪಡ ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರ ವತಿಯಿಂದ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ಧಾರ್ಮಿಕ ಶಿಕ್ಷಣ ತರಗತಿಯನ್ನು ಭಾನುವಾರ ಆರಂಭಿಸಲಾಯಿತು.
ದೇವಾಲಯಗಳ ಸಂವರ್ಧನಾ ಸಮಿತಿ ಮಂಗಳೂರು ವಿಭಾಗ ಪ್ರಮುಖ್ ಹಾಗೂ ಪುತ್ತೂರು ಶ್ರೀ ಮಹೋತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷರಾದ ಕೇಶವಪ್ರಸಾದ್ ಮುಳಿಯ ಹಾಗೂ ಹಸಂತಡ್ಕ ಮುರಳಿ ಕೃಷ್ಣ ಅವರ ಮಾರ್ಗದರ್ಶನದಲ್ಲಿ ಚಾಲನೆ ನೀಡಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಕೃಷ್ಣವೇಣಿ ಪ್ರಸಾದ್ ಮುಳಿಯ ಅವರು ದೀಪ ಪ್ರಜ್ವಲನೆಗೊಳಿಸಿ ಕಥೆ, ಭಜನೆ ಹಾಗೂ ವಿವಿಧ ಚಟುವಟಿಕೆಗಳ ಮೂಲಕ 100ಕ್ಕೂ ಮಿಕ್ಕಿ ನೋಂದಾಯಿತ ವಿದ್ಯಾರ್ಥಿಗಳಿಗೆ ತರಗತಿ ನಡೆಸಿ ಮಾಹಿತಿಯನ್ನು ನೀಡಿದರು. ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ವೀಣಾ ಬಾಲಕೃಷ್ಣ ಅವರು ಧಾರ್ಮಿಕ ಶಿಕ್ಷಣದ ಮಾಹಿತಿ ಹಾಗೂ ತಮ್ಮ ಕೇಂದ್ರದ ಮುಖೇನ ಬಿಡುಗಡೆಗೊಳಿಸಿರುವ ಧಾರ್ಮಿಕ ಪಠ್ಯಪುಸ್ತಕ ಕುರಿತಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರ ಕೇರ್ಪಡ ಇದರ ಸಂಚಾಲಕರಾದ ವಸಂತ ನಡುಬೈಲು , ಗೌರವಾಧ್ಯಕ್ಷರಾದ ಐತ್ತಪ್ಪ ಅಲೆಕ್ಕಾಡಿ ಮತ್ತು ವಸಂತ ಹುದೇರಿ, ಅಧ್ಯಕ್ಷರಾದ ಧ್ರುವಕುಮಾರ್ ಕೇರ್ಪಡ , ಶ್ರೀ ಕೇತ್ರ ಕೇರ್ಪಡದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರೂಪರಾಜ ರೈ , ಕೇಂದ್ರದ ಸಂಪನ್ಮೂಲ ವ್ಯಕ್ತಿಯಾದ ಸುಹಾಸ್ ಅಲೆಕ್ಕಾಡಿ , ನಿಂತಿಕಲ್ಲು ವಲಯ ಭಜನಾ ಪರಿಷತ್ ಅಧ್ಯಕ್ಷರಾದ ಪದ್ಮನಾಭ ಪೂದೆ , ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು , ಪೋಷಕರು
ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು