1:50 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕೆಟ್ಟು ನಿಂತ ಬಸ್ಸಿಗೆ ಅಪರಿಚಿತ ವಾಹನ ಡಿಕ್ಕಿ: ಕೆಎಸ್ಸಾರ್ಟಿಸಿ ಕಂಡೆಕ್ಟರ್ ದಾರುಣ ಸಾವು; ಸಿಬ್ಬಂದಿಗಳಿಂದ ಪ್ರತಿಭಟನೆ

21/11/2024, 20:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಕೆಟ್ಟು ನಿಂತಿದ್ದ ಬಸ್ಸಿನ ಚಾಲಕರಿಗೆ ಕಿಟಕಿ ಮೂಲಕ ಊಟ ಕೊಡುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕಂಡೆಕ್ಟರ್ ಸಾವನ್ನಪ್ಪಿದ ದಾರುಣ ಘಟನೆ ನಡೆಯಿತು.


ಅಪಘಾತದಲ್ಲಿ ಕಂಡಕ್ಟರ್ ಅವರನ್ನು ಶ್ರೀನಾಥ್ (40) ಎಂದು ಗುರುತಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ. ಡಿಪೋದಲ್ಲಿ ಮೃತದೇಹವಿಟ್ಟು ಸಿಬ್ಬಂದಿಗಳು ಪ್ರತಿಭಟನೆ ನಡೆಸಿದರು.
ನಿನ್ನೆ ಚಿಕ್ಕಮಗಳೂರಿನಿಂದ ಮೈಸೂರಿಗೆ ಹೋಗಿದ್ದ ಸರ್ಕಾರಿ ಬಸ್ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಕೆಟ್ಟು ನಿಂತಿತ್ತು. ಬೆಳಗ್ಗೆ 9 ಗಂಟೆಗೆ ಕೆಟ್ಟ ಬಸ್, ಮೆಕಾನಿಕ್ ಹೋಗಿದ್ದು ರಾತ್ರಿ 9 ಗಂಟೆಗೆ. ಬಸ್ ರಿಪೇರಿ ಮಾಡುವಾಗ ಡ್ರೈವರ್ ಗೆ ಕಿಟಕಿಯಿಂದ ಊಟ ಕೊಡಲು ಕಂಡಕ್ಟರ್ ಹೋದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ. ಕಂಡಕ್ಟರ್ ಸಾವಿಗೆ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮೃತದೇಹವನ್ನು ಡಿಪೋದಲ್ಲಿಟ್ಟು ದಲಿತ ಸಂಘಟನೆಗಳು ಪ್ರತಿಭಟನೆಗಳು ಪ್ರತಿಭಟನೆ ನಡೆಸಿದವು.

ಇತ್ತೀಚಿನ ಸುದ್ದಿ

ಜಾಹೀರಾತು