8:49 PM Friday14 - November 2025
ಬ್ರೇಕಿಂಗ್ ನ್ಯೂಸ್
ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ…

ಇತ್ತೀಚಿನ ಸುದ್ದಿ

ಕೇವಲ 24 ತಾಸಿನೊಳಗೆ ಮಾತು ಬದಲಾಯಿಸಿದ ಸ್ವಾಮೀಜಿ!: ನಿನ್ನೆ ಕುಮಠಳ್ಳಿ ಪರ!, ಇಂದು ಸವದಿ ಪರ!

08/04/2023, 20:54

ರಾಹುಲ್ ಅಥಣಿ ಬೆಳಗಾವಿ

info.reporterkarnataka gmail.com): ಧರ್ಮಕ್ಕೂ ರಾಜಕೀಯಕ್ಕೂ ಬಹಳ ನಂಟು. ಸ್ವಾಮೀಜಿಗಳು, ಪೀಠಾಧಿಪತಿಗಳು ರಾಜಕಾರಣಿಗಳನ್ನು ಬೆಂಬಲಿಸುವುದು, ಅವರ ಪರವಾಗಿ ಸಭೆ ನಡೆಸುವುದು ಮಾಮೂಲಿಯಾಗಿ ಹೋಗಿದೆ. ಹಾಗೆ ಸ್ವಾಮೀಜಿಯವರೊಬ್ಬರು 24 ತಾಸಿನೊಳಗೆ ಮಾತು ಬದಲಾಯಿಸಿ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದ್ದಾರೆ.

ಪಂಚಮಸಾಲಿ ಪೀಠದ ಜಗದ್ಗುರು ಮಹಾದೇವ ಶಿವಾಚಾರ್ಯ ಶ್ರೀಗಳು ನಿನ್ನೆ ದಿನ ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಹಾಲಿ ಶಾಸಕ ಮಹೇಶ್ ಕುಮಠಳ್ಳಿ ಪರ ಬ್ಯಾಟಿಂಗ್ ನಡೆದಿದ್ದರು. ಆದರೆ ಇವತ್ತು ಉಲ್ಟಾ ಹೊಡೆದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಪರ ಹೇಳಿಕೆ ನೀಡಿದ್ದಾರೆ. ದಿನಕ್ಕೊಂದುದು ಹೇಳಿಕೆ ನೀಡುವ ಮೂಲಕ ಮಹಾದೇವ ಶಿವಾಚಾರ್ಯ ಸ್ವಾಮೀಜಿ ಅವರು ಭಕ್ತರು ಮೂಗಿನ ಮೇಲೆ ಬೆರಳಿಡುವಂತೆ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಸ್ವಾಮೀಜಿ ದ್ವಂದ್ವ ನಿಲುವು ಪ್ರಕಟಿಸಿದ್ದಾರೆ.
ಲಕ್ಷ್ಮಣ ಸವದಿ ಅವರು ಇತ್ತಿಚೆಗೆ ಅಥಣಿಯಲ್ಲಿ ಮಾತನಾಡಿ ಪಂಚಮಸಾಲಿ ನನ್ನ ಬೆನ್ನಿಗೆ ಇದೆ ಎಂಬ ಹೇಳಿಕೆ ನೀಡಿದ್ದರು. ಅದಕ್ಕೆ ಸ್ವಾಮೀಜಿಯವರು ನಿನ್ನೆ ಪ್ರತಿಕ್ರಿಯಿಸಿ, ಅವರ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಅಲ್ಲಿ ಮಹೇಶ ಕುಮಠಳ್ಳಿ ಪರವಾಗಿ ಪಂಚಮಸಾಲಿ ಸಮಾಜ ಇದೆ ಎಂದು ಹೇಳಿದ್ದರು.
ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ಶುಕ್ರವಾರ ಪಂಚಮಸಾಲಿ ಮಠಾಧೀಶರ ಒಕ್ಕೂಟದ ಆಶ್ರಯದಲ್ಲಿ 20ಕ್ಕೂ ಅಧಿಕ ಶ್ರೀಗಳ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಸ್ವಾಮೀಜಿ ಈ ಹೇಳಿಕೆ ನೀಡಿದ್ದರು.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು ವಿವಿಧ ಪಕ್ಷಗಳು ನಮ್ಮ ಸಮಾಜದ ಮುಖಂಡರಿಗೆ ಟಿಕೇಟ್ ನೀಡುತ್ತಿವೆ. ನಮ್ಮ ಸಮಾಜ ಜನರು ಮೊದಲು ನಮ್ಮ ಸಮಾಜದ ಅಭ್ಯರ್ಥಿಗಳ ಬೆಂಬಲಕ್ಕೆ ನಿಂತು ಸಮಾಜದವರನ್ನು ಬೆಳೆಸಬೇಕು. ಅದೇ ರೀತಿ ಯಾರೋ ಕೆಲವು ಜನರನ್ನು ಕೇಳಿ ಇಡೀ ಸಮಾಜ ನಮ್ಮ ಬೆಂಬಲಕ್ಕೆ ಇದೆ ಎಂದು ಅವರು ಹೇಳಿಕೆ ಕೊಡುತ್ತಿರುವುದು ಅವರಿಗೆ ಶೋಭೆ ತರುವಂತಹದುಲ್ಲ ಎಂದು ಹೇಳಿದರು. ಈ ವೇಳೆ ಬೆಂಗಳೂರಿನ ಆರೂಢ ಭಾರತಿ ಶ್ರೀಗಳು, ರಾಮೋಹಳ್ಳಿಯ ಸಿದ್ಧಲಿಂಗ ಶ್ರೀಗಳು, ದತ್ತಪೀಠದ ಬಾಪೂಜಿ ಶ್ರೀಗಳು, ಕುಂಚನೂರಿನ ಕಮರಿಮಠದ ಸಿದ್ಧಲಿಂಗ ದೇವರು, ವಿಜಯಪುರ ಯೊಗೇಶ್ವರಿ ಮಾತಾಜಿ, ಹಿಪ್ಪರಗಿಯ ಸಿದ್ಧಾರೂಡ ಶ್ರೀ, ಸಿರಬೂರಿನ ಕಲ್ಮೇಶ್ವರ ಮಹಾರಾಜರು, ನವಲಗುಂದದ ಬಸವಾನಂದ ಶ್ರೀಗಳು, ಗೋಕಾಕಿನ ಗುರುಬಸವ ಶ್ರೀಗಳು ಸೇರಿದಂತೆ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು