5:02 AM Tuesday13 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಕೆರ್ವಾಶೆ: ಮನೆಗೆ ನುಗ್ಗಿ ವೃದ್ಧನ ಕಣ್ಣಿಗೆ ಮೆಣಸಿನ ಪುಡಿ ಎರಚಿ ಕಳ್ಳತನಕ್ಕೆ ಯತ್ನ; ಟಾರ್ಚ್ ಕಸಿದು ಪರಾರಿಯಾದ ಚೋರರು

18/07/2022, 22:00

ಕಾರ್ಕಳ(reporterkarnataka.com): ಮೆಣಸಿನ ಹುಡಿ ಎರಚಿ ಮನೆಗೆ ನುಗ್ಗಿ ಕಳ್ಳತನ ನಡೆಸಲು ಯತ್ನಿಸಿದ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆಯಲ್ಲಿ  ಜು18 ರ ಮಧ್ಯರಾತ್ರಿ ನಡೆದಿದೆ. 

ಕೆರ್ವಾಶೆ ಕೃಷ್ಣಭಟ್ (71) ಎಂಬುವವರ ದೇವಿಕೃಪಾ  ಮನೆಯಲ್ಲಿ ಈ ಘಟನೆ ನಡೆದಿದೆ .

ಕೃಷ್ಣಭಟ್  ಅವರು ಜು.18 ರಂದು ತಡರಾತ್ರಿ 1:30 ಗಂಟೆಯ ಸಮಯಕ್ಕೆ ಮನೆಯ ಹೊರಗೆ ನಾಯಿ ಬೊಗಳಿದ ಶಬ್ದ ಕೇಳಿ ಮನೆ ಬಾಗಿಲನ್ನು ತೆರೆದು ಹೊರಗೆ ಬಂದಾಗ ಯಾರೋ 2 ಜನ ಅಪರಿಚಿತರಿದ್ದು, ಓರ್ವ ಇವರ ಮುಖಕ್ಕೆ ಮೆಣಸಿನ ಪುಡಿಯನ್ನು ಎಸೆದು, ಇನ್ನೊಬ್ಬನು ಗಟ್ಟಿಯಾಗಿ ಹಿಡಿದು ಪಂಚೆಯನ್ನು ಹಿಡಿದೆಳೆದು ಅದನ್ನು ಅವರ ಮುಖಕ್ಕೆ ಸುತ್ತಿ ಕೂಗಾಡದಂತೆ ಬಾಯಿ ಹಾಗೂ ಕುತ್ತಿಗೆಯನ್ನು ಒತ್ತಿ ಹಿಡಿದಿದ್ದ ಕೂಡಲೇ ಕೃಷ್ಣ ಭಟ್ ರವರು ತಪ್ಪಿಸಿಕೊಂಡು ಜೋರಾಗಿ ಬೊಬ್ಬೆ ಹೊಡೆದಾಗ ಇವರ ಕೈಯಲ್ಲಿದ್ದ ಟಾರ್ಚನ್ನು ತೆಗೆದುಕೊಂಡು ಇಬ್ಬರು ಅಪರಿಚಿತರು ಅಲ್ಲಿಂದ ಓಡಿ ಹೋಗಿದ್ದಾರೆ. ಮನೆಯಲ್ಲಿ ಕಳ್ಳತನ ಮಾಡುವ ಉದ್ದೇಶದಿಂದ ಮನೆಗೆ ಪ್ರವೇಶಿಸಲು ಪ್ರಯತ್ನಿಸಿದ್ದಾರೆಂದು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು