7:30 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕೆರ್ವಾಶೆ: ಮನೆಗೆ ನುಗ್ಗಿ ವೃದ್ಧನ ಕಣ್ಣಿಗೆ ಮೆಣಸಿನ ಪುಡಿ ಎರಚಿ ಕಳ್ಳತನಕ್ಕೆ ಯತ್ನ; ಟಾರ್ಚ್ ಕಸಿದು ಪರಾರಿಯಾದ ಚೋರರು

18/07/2022, 22:00

ಕಾರ್ಕಳ(reporterkarnataka.com): ಮೆಣಸಿನ ಹುಡಿ ಎರಚಿ ಮನೆಗೆ ನುಗ್ಗಿ ಕಳ್ಳತನ ನಡೆಸಲು ಯತ್ನಿಸಿದ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆಯಲ್ಲಿ  ಜು18 ರ ಮಧ್ಯರಾತ್ರಿ ನಡೆದಿದೆ. 

ಕೆರ್ವಾಶೆ ಕೃಷ್ಣಭಟ್ (71) ಎಂಬುವವರ ದೇವಿಕೃಪಾ  ಮನೆಯಲ್ಲಿ ಈ ಘಟನೆ ನಡೆದಿದೆ .

ಕೃಷ್ಣಭಟ್  ಅವರು ಜು.18 ರಂದು ತಡರಾತ್ರಿ 1:30 ಗಂಟೆಯ ಸಮಯಕ್ಕೆ ಮನೆಯ ಹೊರಗೆ ನಾಯಿ ಬೊಗಳಿದ ಶಬ್ದ ಕೇಳಿ ಮನೆ ಬಾಗಿಲನ್ನು ತೆರೆದು ಹೊರಗೆ ಬಂದಾಗ ಯಾರೋ 2 ಜನ ಅಪರಿಚಿತರಿದ್ದು, ಓರ್ವ ಇವರ ಮುಖಕ್ಕೆ ಮೆಣಸಿನ ಪುಡಿಯನ್ನು ಎಸೆದು, ಇನ್ನೊಬ್ಬನು ಗಟ್ಟಿಯಾಗಿ ಹಿಡಿದು ಪಂಚೆಯನ್ನು ಹಿಡಿದೆಳೆದು ಅದನ್ನು ಅವರ ಮುಖಕ್ಕೆ ಸುತ್ತಿ ಕೂಗಾಡದಂತೆ ಬಾಯಿ ಹಾಗೂ ಕುತ್ತಿಗೆಯನ್ನು ಒತ್ತಿ ಹಿಡಿದಿದ್ದ ಕೂಡಲೇ ಕೃಷ್ಣ ಭಟ್ ರವರು ತಪ್ಪಿಸಿಕೊಂಡು ಜೋರಾಗಿ ಬೊಬ್ಬೆ ಹೊಡೆದಾಗ ಇವರ ಕೈಯಲ್ಲಿದ್ದ ಟಾರ್ಚನ್ನು ತೆಗೆದುಕೊಂಡು ಇಬ್ಬರು ಅಪರಿಚಿತರು ಅಲ್ಲಿಂದ ಓಡಿ ಹೋಗಿದ್ದಾರೆ. ಮನೆಯಲ್ಲಿ ಕಳ್ಳತನ ಮಾಡುವ ಉದ್ದೇಶದಿಂದ ಮನೆಗೆ ಪ್ರವೇಶಿಸಲು ಪ್ರಯತ್ನಿಸಿದ್ದಾರೆಂದು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು