10:00 PM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

KFD | ಚಿಕ್ಕಮಗಳೂರು: ಮಹಾಮಾರಿ ಕೆಎಫ್ ಡಿಗೆ ಕಾಫಿನಾಡಲ್ಲಿ ಮೊದಲ ಬಲಿ; ಕೊಪ್ಪದ ವೃದ್ದೆ ಸಾವು

17/03/2025, 12:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಟ್ಟಿನಮನೆ ಗ್ರಾಮದಲ್ಲಿ ಕೆ.ಎಫ್.ಡಿ. (ಕಯಾಸನೂರು ಅರಣ್ಯ ಜ್ವರ) ಮತ್ತೊಮ್ಮೆ ತೀವ್ರತೆ ಹೆಚ್ಚಿಸಿಕೊಂಡಿದ್ದು, 65 ವರ್ಷದ ವೃದ್ಧೆ ಈ ಮಂಗಮ ಖಾಯಿಲೆಗೆ ಬಲಿಯಾಗಿದ್ದಾರೆ.
*ಘಟನೆಯ ವಿವರ:*
ವೃದ್ಧೆ ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.
ಜ್ವರ ಬಂದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ರಕ್ತದ ಮಾದರಿಯನ್ನು ಪರೀಕ್ಷಿಸಿದಾಗ ಕೆ.ಎಫ್.ಡಿ. ಸೋಂಕು ದೃಢಪಟ್ಟಿತು.
ಕೊಪ್ಪ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆ, ಚಿಕಿತ್ಸೆ ಫಲಿಸದೆ ಕಳೆದ ರಾತ್ರಿ ಮೃತಪಟ್ಟಿದ್ದಾರೆ.
*ಸರ್ಕಾರದ ಎಚ್ಚರಿಕೆ:*
ಬೇಸಿಗೆ ಕಾಲದಲ್ಲಿ ಹಳ್ಳಿಗಳಲ್ಲಿ ಕೆ.ಎಫ್.ಡಿ. ಸೋಂಕು ಹೆಚ್ಚುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ಎಚ್ಚರಿಸಿದೆ. ಮುಂಜಾಗ್ರತಾ ಕ್ರಮವಾಗಿ ತೋಟಗಳಿಗೆ ಹೋಗುವಾಗ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.
ಕಾಡು ಪ್ರದೇಶಗಳಲ್ಲಿ ಹೆಚ್ಚು ಸಮಯ ಕಳೆದರೆ ಸೋಂಕು ಹಿಡಿಯುವ ಸಾಧ್ಯತೆ ಹೆಚ್ಚಾಗುತ್ತದೆ. ಗ್ರಾಮಸ್ಥರು ಹಾಗೂ ತೋಟ ಕಾರ್ಮಿಕರು ಎಚ್ಚರಿಕೆಯಿಂದ ಇರಬೇಕಾಗಿದ್ದು, ಜ್ವರದ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣವೇ ಆಸ್ಪತ್ರೆಗೆ ಭೇಟಿ ನೀಡುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು