7:39 AM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

KFD | ಚಿಕ್ಕಮಗಳೂರು: ಮಹಾಮಾರಿ ಕೆಎಫ್ ಡಿಗೆ ಕಾಫಿನಾಡಲ್ಲಿ ಮೊದಲ ಬಲಿ; ಕೊಪ್ಪದ ವೃದ್ದೆ ಸಾವು

17/03/2025, 12:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಟ್ಟಿನಮನೆ ಗ್ರಾಮದಲ್ಲಿ ಕೆ.ಎಫ್.ಡಿ. (ಕಯಾಸನೂರು ಅರಣ್ಯ ಜ್ವರ) ಮತ್ತೊಮ್ಮೆ ತೀವ್ರತೆ ಹೆಚ್ಚಿಸಿಕೊಂಡಿದ್ದು, 65 ವರ್ಷದ ವೃದ್ಧೆ ಈ ಮಂಗಮ ಖಾಯಿಲೆಗೆ ಬಲಿಯಾಗಿದ್ದಾರೆ.
*ಘಟನೆಯ ವಿವರ:*
ವೃದ್ಧೆ ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.
ಜ್ವರ ಬಂದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ರಕ್ತದ ಮಾದರಿಯನ್ನು ಪರೀಕ್ಷಿಸಿದಾಗ ಕೆ.ಎಫ್.ಡಿ. ಸೋಂಕು ದೃಢಪಟ್ಟಿತು.
ಕೊಪ್ಪ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆ, ಚಿಕಿತ್ಸೆ ಫಲಿಸದೆ ಕಳೆದ ರಾತ್ರಿ ಮೃತಪಟ್ಟಿದ್ದಾರೆ.
*ಸರ್ಕಾರದ ಎಚ್ಚರಿಕೆ:*
ಬೇಸಿಗೆ ಕಾಲದಲ್ಲಿ ಹಳ್ಳಿಗಳಲ್ಲಿ ಕೆ.ಎಫ್.ಡಿ. ಸೋಂಕು ಹೆಚ್ಚುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ಎಚ್ಚರಿಸಿದೆ. ಮುಂಜಾಗ್ರತಾ ಕ್ರಮವಾಗಿ ತೋಟಗಳಿಗೆ ಹೋಗುವಾಗ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.
ಕಾಡು ಪ್ರದೇಶಗಳಲ್ಲಿ ಹೆಚ್ಚು ಸಮಯ ಕಳೆದರೆ ಸೋಂಕು ಹಿಡಿಯುವ ಸಾಧ್ಯತೆ ಹೆಚ್ಚಾಗುತ್ತದೆ. ಗ್ರಾಮಸ್ಥರು ಹಾಗೂ ತೋಟ ಕಾರ್ಮಿಕರು ಎಚ್ಚರಿಕೆಯಿಂದ ಇರಬೇಕಾಗಿದ್ದು, ಜ್ವರದ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣವೇ ಆಸ್ಪತ್ರೆಗೆ ಭೇಟಿ ನೀಡುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು