3:46 PM Thursday18 - June 2026
ಬ್ರೇಕಿಂಗ್ ನ್ಯೂಸ್
ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ…

ಇತ್ತೀಚಿನ ಸುದ್ದಿ

ಗ್ರಾಪಂ ನಿರ್ಮಿಸಿದ ತೋಡನ್ನೇ ಮುಚ್ಚಿದ ಖದೀಮ!: ಪ್ರಶ್ನಿಸಿದ ನೆರೆಮನೆಯವರಿಗೆ ಕಲ್ಲೇಟು; ಇಬ್ಬರು ಮಹಿಳೆಯರು ಸಹಿತ 3 ಮಂದಿಗೆ ಗಾಯ

29/03/2026, 22:02

ಸಾಂದರ್ಭಿಕ ಚಿತ್ರ
ಉಳ್ಳಾಲ(reporterkarnataka.com): ಕೊಣಾಜೆ ಠಾಣೆ ವ್ಯಾಪ್ತಿಯ ಅಂಬ್ಲಮೊಗರು ಗ್ರಾಮದ ಪಟ್ನಮೊಗರು ಎಂಬಲ್ಲಿ ಪಂಚಾಯತ್‌ ನಿರ್ಮಿಸಿದ ಮಳೆ ನೀರಿನ ತೋಡನ್ನೇ ಖದೀಮನೊಬ್ಬ
ಮುಚ್ಚಿದ್ದು, ಇದನ್ನು ಪ್ರಶ್ನಿಸಿದ ನೆರೆಮನೆಯ ಇಬ್ಬರು ಮಹಿಳೆಯರು ಹಾಗೂ ಯುವಕನಿಗೆ ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಪಟ್ನಮೊಗರು ನಿವಾಸಿ ನಾಗೇಶ್‌ ಶೇಣವ ಹಲ್ಲೆ ನಡೆಸಿರುವ
ಆರೋಪಿಯಾಗಿದ್ದು, ಕೊಣಾಜೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


ಆರೋಪಿ ನಾಗೇಶ್‌ ಶೇಣವ ನೆರೆಮನೆಯ ಬೇಬಿ(56), ಅವರ ಪುತ್ರ ರವಿರಾಜ್‌ ಮತ್ತು ಸೊಸೆ ವರ್ಷಾ ಎಂಬವರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಇಂದು ಬೆಳಿಗ್ಗೆ 8.30 ರ ಸುಮಾರಿಗೆ ನಾಗೇಶ್‌ ಶೇಣವ ತನ್ನ ಅಂಗಳದಲ್ಲಿ ಹಲವು ವರ್ಷಗಳಿಂದ ಹಾದುಹೋಗುವ , ಪಂಚಾಯತ್‌ ನಿರ್ಮಿಸಿದ್ದಂತಹ ಮಳೆ ನೀರಿನ ತೋಡಿನ ಛೇಂಬರನ್ನು ಅಗೆದು, ಇಟ್ಟಿಗೆಯಿಂದ ಸಂಪೂರ್ಣವಾಗಿ ಮುಚ್ಚಿದ್ದಾನೆ. ಇದನ್ನು ನೆರೆಮನೆಯ ರವಿರಾಜ್‌ ಅವರು ಪ್ರಶ್ನಿಸಿದ್ದಾರೆ. ಈ ವೇಳೆ ನಾಗೇಶ್ ಶೇಣವ ಅವರ ಕೆನ್ನೆಗೆ ಹೊಡೆದು ಹಲ್ಲೆ ನಡೆಸಿದ್ದಾರೆ. ಇದನ್ನು ತಡೆಯಲು ಮುಂದಾದ ಬೇಬಿ ಅವರಿಗೆ ಸ್ಥಳದಲ್ಲಿದ್ದ ಕಲ್ಲನ್ನು ಕಾಲಿಗೆ ಎಸೆದು ಗಂಭೀರ ರೀತಿಯಲ್ಲಿ ಹಲ್ಲೆ ನಡೆಸಿದ್ದಾನೆ. ಅದನ್ನು ಪ್ರಶ್ನಿಸಿದ ಸೊಸೆ ವರ್ಷಾ ಅವರ ಮೇಲೂ ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ.
ಈ ಕುರಿತು ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ದೂರಿನಂತೆ ಬಿಎನ್‌ ಎಸ್‌ ಆಕ್ಟ್‌ ನಡಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು