11:40 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಖಾನಾಪೂರ ಕುಡಿಯುವ ನೀರಿನ ಯೋಜನೆ ಕಾಮಗಾರಿ ಆಮೆಗತಿ: ಗ್ರಾಮಸ್ಥರ ಸ್ಥಿತಿ ಅಧೋಗತಿ

04/12/2023, 10:50

ರಮೇಶ್ ದೇವದುರ್ಗ ರಾಯಚೂರು

info.reporterkarnataka@gmail.com

ದೇವದುರ್ಗ ತಾಲ್ಲೂಕಿನ ಹೇಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಖಾನಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಕುಡಿವ ನೀರಿನ ಯೋಜನೆ ಕಾಮಗಾರಿ ನಿಧಾನಗತಿಯಲ್ಲಿ ನಡೆದಿದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ.
ಜಲ ಜೀವನ್ ಮಿಷನ್ ಯೋಜನೆಯಡಿ ಒಂದು ಕೋಟಿಗೂ ಅಧಿಕ ಮೊತ್ತದ ಮನೆ ಮನೆಗೆ ನೀರು ಸರಬರಾಜು ಮಾಡುವ ಕುಡಿವ ನೀರಿನ ಪೈಪ್ ಕಾಮಗಾರಿ ನಡೆದಿದೆ. ಮಂದಗತಿಯಲ್ಲಿ ಕಾಮಗಾರಿ ನಡೆದಿದ್ದರಿಂದ ಪೈಪ್ ಲೈನ್ ಗೆ ತೆಗೆದ ತೆಗ್ಗು ಸಂಚಾರಕ್ಕೆ ತೊಂದರೆ ಉಂಟು ಮಾಡಿದೆ.
ಗುತ್ತೇದಾರ ನಿರ್ಲಕ್ಷ್ಯ.ದಿಂದ ರಾತ್ರಿ ವೇಳೆ ವಾರ್ಡಗಳ ಸಂಚಾರ ಮಾಡಲು ಮಕ್ಕಳಿಗೆ ಹಾಗೂ ವೃದ್ಧರಿಗೆ ತೊಂದರೆಯಾಗಿದೆ.
ಅಹಿತಕರ ಘಟನೆ ನಡೆಯುವ ಮೊದಲು ಸಂಬಂಧಿಸಿದ ಅಧಿಕಾರಿಗಳು ಬಿರುಕು ಬಿಟ್ಟ ತೆಗ್ಗುಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿ ಕೊಡಬೇಕು ಹಾಗೂ ಖಾನಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಕುಡಿವ ನೀರಿನ ಯೋಜನೆ ಕಾಮಗಾರಿ ಅಂದಾಜು ಪತ್ರದಂತೆ ನಡೆಯುತ್ತಿಲ್ಲ. ತೋಡಿದ ಗುಂಡಿಗಳು ಮುಚ್ಚದೆ ಹಾಗೆ ಇರುವುದರಿಂದ ವಾಹನ ಸವಾರರು, ಜನರು ತಿರುಗಾಡಲು ಬೇಸತ್ತು ಹೋಗಿದ್ದಾರೆ. ಆದ್ದರಿಂದ ಅಧಿಕಾರಿಗಳ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದ ಗ್ರಾಮ ಘಟಕದ ಅಧ್ಯಕ್ಷ ನಾಗಪ್ಪ ಖಾನಾಪೂರ ಅವರು ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು