3:02 PM Monday29 - December 2025
ಬ್ರೇಕಿಂಗ್ ನ್ಯೂಸ್
ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ

ಇತ್ತೀಚಿನ ಸುದ್ದಿ

ಖಾಸಗಿ ಬಸ್ ದರ ಏರಿಕೆ ವಾಪಸ್ : ಹಳೆಯ ದರ ವಸೂಲಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ

06/07/2021, 18:02

ಮಂಗಳೂರು(reporterkarnataka news):

ಕೊರೊನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿ ಪ್ರಯಾಣಿಕರ ಒಯ್ಯುವ ಹಾಗೂ ತೈಲ ಬೆಲೆಯೇರಿಕೆ ನೆಪವೊಡ್ಡಿ ಹೆಚ್ಚಿಸಲಾದ ಖಾಸಗಿ ಬಸ್ ದರವನ್ನು ಹಿಂಪಡೆಲಾಗಿದೆ.

ಆರ್ ಟಿಎ ಸಭೆ ನಡೆಯುವ ವರೆಗೆ ದ.ಕ. ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ತಡೆಯಲಾಗಿದೆ ಎಂದು  ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಹೇಳಿದ್ದಾರೆ.

ಲಾಕ್ ಡೌನ್ ಮಾರ್ಗಸೂಚಿ ಸಡಿಲಿಕೆಗೊಂಡು ಶೇ. 100ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಖಾಸಗಿ ಬಸ್ ದರ ಏರಿಕೆ ಪ್ರಸ್ತಾಪ ಹಿಂಪಡೆಯಲಾಗಿದೆ. ಶೇ. 50ರಷ್ಟು ಪ್ರಯಾಣಿಕರನ್ನು ಕರೆದೊಯ್ದರೆ ನಷ್ಟ ಅನುಭವಿಸಬೇಕಾಗುತ್ತದೆ ಎಂಬ ಕಾರಣಕ್ಕಾಗಿ ಖಾಸಗಿ ಬಸ್ ಗಳ ಪ್ರಯಾಣ ದರವನ್ನು ಜು. 1ರಿಂದ ಅನ್ವಯವಾಗುವಂತೆ ಶೇ. 20ರಷ್ಟು ಹೆಚ್ಚಿಸಲಾಗಿತ್ತು. ಲಾಕ್ ಡೌನ್ ಅವಧಿ ವರೆಗೆ ಈ ದರ ಪಡೆಯುವಂತೆ ಬಸ್ ಮಾಲಕರಿಗೆ ಸೂಚಿಸಲಾಗಿತ್ತು. ಇದೀಗ ಲಾಕ್ ಡೌನ್ ಸಡಿಲಿಕೆ ಆಗಿರುವ ಕಾರಣ ಬಸ್ ಗಳಲ್ಲಿ ಹಳೆಯ ದರವನ್ನೇ ಪಡೆಯಬೇಕು ಎಂದು ಜಿಲ್ಲಾಧಿಕಾರ ತಿಳಿಸಿದ್ದಾರೆ.

ಮುಂದಿನ ಒಂದು ವಾರದೊಳಗೆ ಆರ್.ಟಿ.ಎ ಸಭೆ ನಡೆಸಲಾಗುವುದು. ಸಭೆಯಲ್ಲಿ ದರ ಏರಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಖಾಸಗಿ ಬಸ್ ಮಾಲಕರೊಂದಿಗೆ ಈ ಕುರಿತು ಸಭೆ ನಡೆಸಲಾಗಿದ್ದು, ದರ ಏರಿಕೆ ಹಿಂಪಡೆಯಲು ಬಸ್ ಮಾಲಕರು ಒಪ್ಪಿಕೊಂಡಿದ್ದಾರೆ. ಬಸ್ ಪ್ರಯಾಣ ದರ ಏರಿಕೆ ಮಾಡಬೇಕು ಎಂಬುದು ಬಸ್ ಮಾಲಕರ ಬೇಡಿಕೆಯಾಗಿದೆ ಎಂದು ತಿಳಿದು ಬಂದಿದೆ

ಇತ್ತೀಚಿನ ಸುದ್ದಿ

ಜಾಹೀರಾತು