11:59 PM Tuesday14 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಖಾಸಗಿ ಬಸ್ ದರ ಏರಿಕೆ ವಾಪಸ್ : ಹಳೆಯ ದರ ವಸೂಲಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ

06/07/2021, 18:02

ಮಂಗಳೂರು(reporterkarnataka news):

ಕೊರೊನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿ ಪ್ರಯಾಣಿಕರ ಒಯ್ಯುವ ಹಾಗೂ ತೈಲ ಬೆಲೆಯೇರಿಕೆ ನೆಪವೊಡ್ಡಿ ಹೆಚ್ಚಿಸಲಾದ ಖಾಸಗಿ ಬಸ್ ದರವನ್ನು ಹಿಂಪಡೆಲಾಗಿದೆ.

ಆರ್ ಟಿಎ ಸಭೆ ನಡೆಯುವ ವರೆಗೆ ದ.ಕ. ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ತಡೆಯಲಾಗಿದೆ ಎಂದು  ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಹೇಳಿದ್ದಾರೆ.

ಲಾಕ್ ಡೌನ್ ಮಾರ್ಗಸೂಚಿ ಸಡಿಲಿಕೆಗೊಂಡು ಶೇ. 100ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಖಾಸಗಿ ಬಸ್ ದರ ಏರಿಕೆ ಪ್ರಸ್ತಾಪ ಹಿಂಪಡೆಯಲಾಗಿದೆ. ಶೇ. 50ರಷ್ಟು ಪ್ರಯಾಣಿಕರನ್ನು ಕರೆದೊಯ್ದರೆ ನಷ್ಟ ಅನುಭವಿಸಬೇಕಾಗುತ್ತದೆ ಎಂಬ ಕಾರಣಕ್ಕಾಗಿ ಖಾಸಗಿ ಬಸ್ ಗಳ ಪ್ರಯಾಣ ದರವನ್ನು ಜು. 1ರಿಂದ ಅನ್ವಯವಾಗುವಂತೆ ಶೇ. 20ರಷ್ಟು ಹೆಚ್ಚಿಸಲಾಗಿತ್ತು. ಲಾಕ್ ಡೌನ್ ಅವಧಿ ವರೆಗೆ ಈ ದರ ಪಡೆಯುವಂತೆ ಬಸ್ ಮಾಲಕರಿಗೆ ಸೂಚಿಸಲಾಗಿತ್ತು. ಇದೀಗ ಲಾಕ್ ಡೌನ್ ಸಡಿಲಿಕೆ ಆಗಿರುವ ಕಾರಣ ಬಸ್ ಗಳಲ್ಲಿ ಹಳೆಯ ದರವನ್ನೇ ಪಡೆಯಬೇಕು ಎಂದು ಜಿಲ್ಲಾಧಿಕಾರ ತಿಳಿಸಿದ್ದಾರೆ.

ಮುಂದಿನ ಒಂದು ವಾರದೊಳಗೆ ಆರ್.ಟಿ.ಎ ಸಭೆ ನಡೆಸಲಾಗುವುದು. ಸಭೆಯಲ್ಲಿ ದರ ಏರಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಖಾಸಗಿ ಬಸ್ ಮಾಲಕರೊಂದಿಗೆ ಈ ಕುರಿತು ಸಭೆ ನಡೆಸಲಾಗಿದ್ದು, ದರ ಏರಿಕೆ ಹಿಂಪಡೆಯಲು ಬಸ್ ಮಾಲಕರು ಒಪ್ಪಿಕೊಂಡಿದ್ದಾರೆ. ಬಸ್ ಪ್ರಯಾಣ ದರ ಏರಿಕೆ ಮಾಡಬೇಕು ಎಂಬುದು ಬಸ್ ಮಾಲಕರ ಬೇಡಿಕೆಯಾಗಿದೆ ಎಂದು ತಿಳಿದು ಬಂದಿದೆ

ಇತ್ತೀಚಿನ ಸುದ್ದಿ

ಜಾಹೀರಾತು