3:46 PM Friday24 - October 2025
ಬ್ರೇಕಿಂಗ್ ನ್ಯೂಸ್
Bangaluru | ಪಿಡಿಪಿಎಸ್‌ಯಡಿ ಈರುಳ್ಳಿ ಖರೀದಿ ಪ್ರಯತ್ನ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ… Bangaluru | ರಾಜ್ಯ ಸರಕಾರಕ್ಕೆ ಕೆಎಸ್ ಡಿಎಲ್ ರಿಂದ 135 ಕೋಟಿ ಡಿವಿಡೆಂಡ್… ವಿರಾಜಪೇಟೆ ಲಾಡ್ಜ್‌ನಲ್ಲಿ ಯುವತಿ ಜತೆ ತಂಗಿದ್ದ ಯುವಕನ ಸಾವಿಗೆ ಕಿಡ್ನಿ ವೈಫಲ್ಯ ಕಾರಣ:… ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕಡೂರು ಸಮೀಪದ ಹಡಗಲು ಗ್ರಾಮ ಅಕ್ಷರಶಃ ಜಲಾವೃತ ಕೊಡಗಿನಲ್ಲಿ ಅಸ್ಸಾಂ ಕಾರ್ಮಿಕರಿಂದ ಆಟೋ ಚಾಲಕನ ಮೇಲೆ ಹಲ್ಲೆ: ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ… ಕೊಡ್ಲಿಪೇಟೆಯಲ್ಲಿ ಉದ್ಯಮಿ ಮೇಲೆ ಲಾರಿ ಹರಿಸಿ ಕೊಲೆ ಯತ್ನ: ವಾಹನ ಬಿಟ್ಟು ಚಾಲಕ… ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ,… ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ…

ಇತ್ತೀಚಿನ ಸುದ್ದಿ

ವಿರಾಜಪೇಟೆ ಲಾಡ್ಜ್‌ನಲ್ಲಿ ಯುವತಿ ಜತೆ ತಂಗಿದ್ದ ಯುವಕನ ಸಾವಿಗೆ ಕಿಡ್ನಿ ವೈಫಲ್ಯ ಕಾರಣ: ಮರಣೋತ್ತರ ಪರೀಕ್ಷಾ ವರದಿಯಿಂದ ಬಹಿರಂಗ

24/10/2025, 15:31

ಗಿರಿಧರ್ ಕೊಂಪುಳಿರ ಬೆಂಗಳೂರು

info.reporterkarnataka@gmail com

ಬೆಂಗಳೂರು ನಗರದ ಮಡಿವಾಳದಲ್ಲಿರುವ ಲಾಡ್ಜ್‌ನಲ್ಲಿ ಪುತ್ತೂರು ಮೂಲದ ಯುವಕ ತಕ್ಷಿತ್ ಸಾವಿಗೀಡಾದ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ರಾಜ್ಯದಾದ್ಯಂತ ಚರ್ಚೆಗೆ ಕಾರಣವಾಗಿದ್ದ ಈ ಪ್ರಕರಣದ ಮರಣೋತ್ತರ ಪರೀಕ್ಷಾ ವರದಿ ಈಗ ಪೊಲೀಸರ ಕೈ ಸೇರಿದ್ದು, ಅದರಲ್ಲಿ ಮಹತ್ವದ ಮಾಹಿತಿ ಬಹಿರಂಗವಾಗಿದೆ.
ವರದಿಯ ಪ್ರಕಾರ, ತಕ್ಷಿತ್ ಕಿಡ್ನಿ ವೈಫಲ್ಯದಿಂದ ಸಾವನ್ನಪ್ಪಿದ್ದಾನೆ ಎಂಬುದು ದೃಢಪಟ್ಟಿದೆ. ಜೊತೆಗೆ ಆತನಿಗೆ ಲಿವರ್ ಸಮಸ್ಯೆ ಹಾಗೂ ಅಸ್ತಮಾದಿಂದ ಕೂಡ ಇತ್ತು ಎಂದು ವರದಿಯಲ್ಲಿ ಉಲ್ಲೇಖವಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಯುವಕನ ಸಾವು ಆರೋಗ್ಯ ಸಮಸ್ಯೆಯಿಂದ ಸಂಭವಿಸಿರುವ ಸಾಧ್ಯತೆ ಹೆಚ್ಚು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ತಕ್ಷಿತ್ ಹಾಗೂ ಓರ್ವ ಯುವತಿ ಕಳೆದ ಎಂಟು ದಿನಗಳಿಂದ ಮಡಿವಾಳದ ಲಾಡ್ಜ್‌ನಲ್ಲಿ ವಾಸವಾಗಿದ್ದರು. ಈ ಅವಧಿಯಲ್ಲಿ ತಕ್ಷಿತ್ ಏಕಾಏಕಿ ಅಸ್ವಸ್ಥಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದ. ಘಟನೆಯು ಅನುಮಾನಾಸ್ಪದವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಯುವತಿಯನ್ನು ವಿಚಾರಣೆಗೊಳಪಡಿಸಿದ್ದು, ಆಕೆ “ಫುಡ್ ಪಾಯಿಸನ್ ಆಗಿರಬಹುದು” ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.
ಯುವತಿ ಹಾಗೂ ತಕ್ಷಿತ್ ಆನ್‌ಲೈನ್ ಮೂಲಕ ಆಹಾರವನ್ನು ಎಲ್ಲಿಂದ ಆರ್ಡರ್ ಮಾಡಿದ್ದರು, ಅವರು ಸೇವಿಸಿದ ಮಾತ್ರೆಗಳ ಸ್ವರೂಪ ಏನು ಎಂಬುದರ ಕುರಿತು ಸ್ಪಷ್ಟ ಮಾಹಿತಿ ಇನ್ನೂ ದೊರೆತಿಲ್ಲ. ಕಿಡ್ನಿ ವೈಫಲ್ಯಕ್ಕೆ ನಿಖರವಾದ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು