7:37 AM Thursday26 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಕಿಕ್ಕಿರಿದು ತುಂಬಿದ್ದ ಬಸ್ ಬಾಗಿಲಿಗೆ ಜೋತು ಬಿದ್ದು ವಿದ್ಯಾರ್ಥಿಗಳ ಪ್ರಯಾಣ: ಮಾಜಿ ಸಾರಿಗೆ ಸಚಿವ ಸವದಿ ತವರಿನಲ್ಲಿ ಇದು ಸಾಮಾನ್ಯ!

11/11/2021, 18:46

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸಾಮಾನ್ಯ ಅಂದ್ರೆ ಬಸ್ಸಿನಲ್ಲಿ 40ರಿಂದ ಅಥವಾ 50 ಜನರು ಪ್ರಯಾಣ ಮಾಡಬಹುದು. ಆದರೆ ಪ್ರಯಾಣಿಕರ ಸಂಖ್ಯೆ 100ರ ಗಡಿ ದಾಟಿದರೆ ಹೇಗೆ? ಇದು ಮಾಜಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ತವರು ಜಿಲ್ಲೆಯಲ್ಲಿ ಸಾಮಾನ್ಯವಾಗಿ ಕಂಡು ಬರುವ ದೃಶ್ಯ.

ಅಥಣಿ ಕೆ ಎಸ್ ಆರ್ ಟಿ ಬಸ್ ನಲ್ಲಿ ಸರಿ ಸುಮಾರು 120 ಕಿಂತಲೂ ಹೆಚ್ಚೂ ಜನರು ಪ್ರಯಾಣ ಮಾಡುತ್ತಾರೆ. ಸಕಾಲದಲ್ಲಿ ಮನೆಗೆ, ಮನೆಯಿಂದ ಶಾಲಾ – ಕಾಲೇಜು, ಕಚೇರಿ, ಪಟ್ಟಣ ತಲುಪಬೇಕಾದರೆ ಇದು ಅನಿವಾರ್ಯ ಕೂಡ. ಬೆಳಗ್ಗೆ ಮತ್ತು ಸಂಜೆ ಹೊತ್ತಿನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರ ಸಂಖ್ಯೆ ವಿಪರೀತವಿರುತ್ತದೆ. ಜನರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಪ್ರಯಾಣ ಮಾಡುವ ಪರಿಸ್ಥಿತಿ ಎದುರಾಗಿದೆ. ಆರ್ ಟಿಒ ನಿಯಮ ಪ್ರಕಾರ ಸೀಟು ಭರ್ತಿಯಾದ ಬಳಿಕ 10 ಮಂದಿಗೆ ನಿಂತು ಪ್ರಯಾಣಿಸಲು ಅವಕಾಶವಿರುತ್ತದೆ. ಅದಕ್ಕಿಂತ ಹೆಚ್ಚು ಪ್ರಯಾಣಿಕರು ಬಸ್ ತುಂಬಿದ್ದರೆ ಅದನ್ನು ಓವರ್ ಲೋಡ್ ಎಂದೇ ವ್ಯಾಖ್ಯಾನಿಸಲಾಗುತ್ತದೆ.

ಅಥಣಿ ಪಟ್ಟಣದಿಂದ ಖೀಳೆಗಾವ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಬಸ್ಸಿನಲ್ಲಿ ಪ್ರಯಾಣಿಕರು ಕಿಕ್ಕಿರಿದು ತುಂಬಿ ಅಪಾಯವನ್ನು ಲೆಕ್ಕಿಸದೆ ಪ್ರಯಾಣ ಮಾಡುವ ಪರಿಸ್ಥಿತಿ ಇದೆ. ವಿದ್ಯಾರ್ಥಿಗಳು ಬಸ್  ಬಾಗಿಲಿಗೆ ಜೋತು ಬಿದ್ದು ಪ್ರಯಾಣ ಮಾಡುತ್ತಿದ್ದು, ನೋಡುಗರ ಎದೆ ಝಳ್ ಎನಿಸುತ್ತದೆ.

ಈ ಮಾರ್ಗವಾಗಿ ಹಲವು ಗ್ರಾಮಗಳು ಬರುವುದರಿಂದ ಸಾಮಾನ್ಯವಾಗಿ ಜನರು ಇದೇ ಬಸ್ಸನ್ನು ಅವಲಂಬಿಸಿದ್ದಾರೆ. ಒಂದು ಬಸ್ನಲ್ಲಿ 40ರಿಂದ 45 ಸೀಟು ಮಾತ್ರ ಇರುತ್ತದೆ. 10 ಮಂದಿಗೆ ನಿಂತು ಪ್ರಯಾಣಿಸಲು ಅವಕಾಶವಿರುತ್ತದೆ.ಆದರೆ ಈ ಬಸ್ ನಲ್ಲಿ ಸರಿಸುಮಾರು 120 ಹೆಚ್ಚು ಪ್ರಾಮಾಣಿಕರು ಸಂಚಾರ ಮಾಡುವ ಅನಿವಾರ್ಯತೆ ಎದುರಾಗಿದೆ. ಅಥಣಿ ಕೆಎಸ್ ಆರ್ ಟಿಸಿ ಅಧಿಕಾರಿಗಳ ದಿವ್ಯ ನಿರ್ಲಕ್ಷದಿಂದ ಅಪಾಯದಲ್ಲಿ ವಿದ್ಯಾರ್ಥಿಗಳು ಸಂಚಾರ ಮಾಡುವಂತಾಗಿದೆ. ಸಂಚಾರ ಸಂದರ್ಭದಲ್ಲಿ ಒಂದು ಕಡೆ ವಾಲಿಕೊಂಡು ಬಸ್ ಚಲಿಸುತ್ತದೆ.

ಬಸ್ ನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಸಾಮಾನ್ಯವಾಗಿ ಒಂದು ಕಡೆ ವಾಲಿಕೊಂಡು ಬಸ್ ಚಲಿಸುತ್ತದೆ. ಒಳಗೆ ಕುಳಿತ ಪ್ರಯಾಣಿಕರು ಆತಂಕದಲ್ಲಿ ಸಂಚಾರ ಮಾಡುವಂತಾಗಿದೆ.

ದಿನನಿತ್ಯ ಬಸ್ನಲ್ಲಿ ಜನದಟ್ಟಣೆ ಆಗುವುದು ಸಹಜ ಇದರಿಂದ ಪ್ರಯಾಣಿಕರು ಜೀವಭಯದಲ್ಲಿ ಸಂಚಾರ ಮಾಡುವಂತಾಗಿದೆ. 

ವಯೋವೃದ್ಧರು, ಗರ್ಭಿಣಿಯರು ಮತ್ತು ಚಿಕ್ಕ ಮಕ್ಕಳಿಗೆ ಜನದಟ್ಟನೆಯಿಂದ ಸಂಕಷ್ಟ ಎದುರಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಪರದಾಡುವಂತಾಗಿದೆ‌.

ಈ ಕುರಿತು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷರಾದ ಶಶಿಕಾಂತ ಪಾದಸಲಗಿ ಮಾತನಾಡಿ, ಸರಿಯಾದ ಬಸ್ ವ್ಯವಸ್ಥೆ ತಕ್ಷಣ
ಕಲ್ಪಿಸಿ. ಏನಾದರೂ ಅನಾಹುತ ಕಂಡು ಬಂದಲ್ಲಿ ನೇರ ಹೊಣೆಗಾರರು ನೀವೇ ಆಗುತ್ತೀರಿ. ಇನ್ನೆರಡು ದಿನದಲ್ಲಿ ಬಸ್ ವ್ಯವಸ್ಥೆಯಾಗದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಮಾಧ್ಯಮಗಳ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು