1:40 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಬಾಳೆ ಬೆಳೆಗೆ ದೃಷ್ಟಿ ತಾಗದಂತೆ ಅರೆಬೆತ್ತಲೆ ಮಾಡಲ್ ಗಳ ಫೋಟೋ ಅಳವಡಿಸಿದ ಕಿಲಾಡಿ ಕೃಷಿಕ!: ಪಡ್ಡೆ ಹುಡ್ಗರು ಫುಲ್ ಖುಷ್!!

21/02/2025, 18:16

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಫಲವತ್ತಾದ ಕೃಷಿ ಭೂಮಿಯಲ್ಲಿ ಸೊಗಸಾಗಿ ಬೆಳೆದ ಬೆಳೆಗೆ ಸಾರ್ವಜನಿಕರ ದೃಷ್ಟಿ ಬೀಳಬಾರದೆಂಬ ಕಾರಣಕ್ಕೆ ರಕ್ಕಸನ ಮುಖವಾಡ ಅಥವಾ ದೃಷ್ಟಿ ಬೊಂಬೆಗಳನ್ನು ಅಳವಡಿಸುವುದನ್ನು ನೋಡಿದ್ದೇವೆ. ಆದರೆ, ಇದಕ್ಕೆ ಬದಲಾಗಿ ನಂಜನಗೂಡು ತಾಲೂಕಿನ ಚುಂಚನಹಳ್ಳಿ ಬಳಿ ಇರುವ ಕಕ್ಕರಹಟ್ಟಿ ಗ್ರಾಮದ ರೈತನೊಬ್ಬ ಐನಾತಿ ಐಡಿಯಾ ಹುಡುಕಿದ್ದಾನೆ.
ವಿಚಿತ್ರ ಆದರೂ ಸತ್ಯ ಎಂಬ ಮಾತಿನಂತೆ ಬೆದರು ಬೊಂಬೆಯ ಬದಲಾಗಿ ಅರೆಬೆತ್ತಲೆಯಾಗಿ ಇರುವ ಲೇಡಿ ಮಾಡೆಲ್ ಗಳ ಫೋಟೋಗಳನ್ನ ತನ್ನ ಜಮೀನಿನ ಸುತ್ತ ಅಳವಡಿಸಿ ಗ್ರಾಮಸ್ಥರು ಮತ್ತು ದಿನನಿತ್ಯ ಸಂಚರಿಸುವ ಅಕ್ಕಪಕ್ಕದ ಗ್ರಾಮಗಳ ಸಾರ್ವಜನಿಕರ ಚರ್ಚೆಗೆ ಗ್ರಾಸವಾಗಿದ್ದಾನೆ.
ನಂಜನಗೂಡಿನಿಂದ ಮಡಹಳ್ಳಿ ಹಾಗೂ ತಗಡೂರು ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯೆ ಚುಂಚನಹಳ್ಳಿ ಬಳಿ ಇರುವ ಕಕ್ಕರಹಟ್ಟಿ ರೈತ ಸೋಮೇಶ್ ಇಂತಹ ಐನಾತಿ ಐಡಿಯಾ ಹುಡುಕಿ ಚರ್ಚೆಗೆ ಗ್ರಾಸವಾಗಿರುವ ವ್ಯಕ್ತಿ.
ತನ್ನ ನಾಲ್ಕು ಎಕರೆ ಜಮೀನಿನಲ್ಲಿ ಬಾಳೆ ಬೆಳೆಯನ್ನು ಸೊಗಸಾಗಿ ಬೆಳೆದಿದ್ದಾನೆ. ಬಾಳೆ ಬೆಳೆ ಮೇಲೆ ಸಾರ್ವಜನಿಕರು ಮತ್ತು ದಾರಿಹೋಕರ ದೃಷ್ಟಿ ಬೀಳಬಾರದು ಎಂಬ ಕಾರಣಕ್ಕೆ ದೃಷ್ಟಿ ಬೊಂಬೆಗಳನ್ನ ಅಳವಡಿಸುವ ಬದಲು ಮಾಡೆಲ್ ಗಳ ಅರೆಬೆತ್ತಲೆ ಫೋಟೋಗಳನ್ನ ಅಳವಡಿಸಿದ್ದಾನೆ.


ತನ್ನ ಜಮೀನಿನ ಸುತ್ತ ಸುಮಾರು ಹತ್ತಾರು ಕಡೆ ಲೇಡಿ ಮಾಡೆಲ್ ಅರೆಬೆತ್ತಲೆ ಚಿತ್ರಗಳು ರಾರಾಜಿಸುತ್ತಿವೆ.
ದಾರಿಹೋಕರಂತೂ ಸೊಗಸಾಗಿ ಸಮೃದ್ದಿಯಾಗಿ ಬೆಳೆದ ಬಾಳೆ ಗಿಡಗಳ ಮೇಲೆ ದೃಷ್ಟಿ ಹರಿಸದೆ ಮಾಡೆಲ್ ಚಿತ್ರಗಳನ್ನಷ್ಟೇ ಕಣ್ತುಂಬಿಕೊಂಡು ಸಾಗುತ್ತಿದ್ದಾರಂತೆ.
ರೈತ ಸೋಮೇಶ್ ನ ಐನಾತಿ ಐಡಿಯಾ ಕೆಲವು ಗ್ರಾಮಸ್ಥರನ್ನ ಕೆರಳಿಸಿದ್ರೆ ಪಡ್ಡೆ ಹುಡುಗರ ನಿದ್ದೆ ಗೆಡಿಸಿರುವುದಂತೂ ನಿಜ.
ಒಟ್ಟಾರೆ ಸೋಮೇಶ್ ರವರ ಐಡಿಯಾನ ಹೊಗಳಬೇಕೋ…ತೆಗಳಬೇಕೋ…? ಎಂಬುದು ಗ್ರಾಮಸ್ಥರು ಮತ್ತು ಸಾರ್ವಜನಿಕರ ನಿರ್ಧಾರಕ್ಕೆ ಬಿಟ್ಟಿದ್ದು…!

ಇತ್ತೀಚಿನ ಸುದ್ದಿ

ಜಾಹೀರಾತು