10:28 PM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ಬಾಳೆ ಬೆಳೆಗೆ ದೃಷ್ಟಿ ತಾಗದಂತೆ ಅರೆಬೆತ್ತಲೆ ಮಾಡಲ್ ಗಳ ಫೋಟೋ ಅಳವಡಿಸಿದ ಕಿಲಾಡಿ ಕೃಷಿಕ!: ಪಡ್ಡೆ ಹುಡ್ಗರು ಫುಲ್ ಖುಷ್!!

21/02/2025, 18:16

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಫಲವತ್ತಾದ ಕೃಷಿ ಭೂಮಿಯಲ್ಲಿ ಸೊಗಸಾಗಿ ಬೆಳೆದ ಬೆಳೆಗೆ ಸಾರ್ವಜನಿಕರ ದೃಷ್ಟಿ ಬೀಳಬಾರದೆಂಬ ಕಾರಣಕ್ಕೆ ರಕ್ಕಸನ ಮುಖವಾಡ ಅಥವಾ ದೃಷ್ಟಿ ಬೊಂಬೆಗಳನ್ನು ಅಳವಡಿಸುವುದನ್ನು ನೋಡಿದ್ದೇವೆ. ಆದರೆ, ಇದಕ್ಕೆ ಬದಲಾಗಿ ನಂಜನಗೂಡು ತಾಲೂಕಿನ ಚುಂಚನಹಳ್ಳಿ ಬಳಿ ಇರುವ ಕಕ್ಕರಹಟ್ಟಿ ಗ್ರಾಮದ ರೈತನೊಬ್ಬ ಐನಾತಿ ಐಡಿಯಾ ಹುಡುಕಿದ್ದಾನೆ.
ವಿಚಿತ್ರ ಆದರೂ ಸತ್ಯ ಎಂಬ ಮಾತಿನಂತೆ ಬೆದರು ಬೊಂಬೆಯ ಬದಲಾಗಿ ಅರೆಬೆತ್ತಲೆಯಾಗಿ ಇರುವ ಲೇಡಿ ಮಾಡೆಲ್ ಗಳ ಫೋಟೋಗಳನ್ನ ತನ್ನ ಜಮೀನಿನ ಸುತ್ತ ಅಳವಡಿಸಿ ಗ್ರಾಮಸ್ಥರು ಮತ್ತು ದಿನನಿತ್ಯ ಸಂಚರಿಸುವ ಅಕ್ಕಪಕ್ಕದ ಗ್ರಾಮಗಳ ಸಾರ್ವಜನಿಕರ ಚರ್ಚೆಗೆ ಗ್ರಾಸವಾಗಿದ್ದಾನೆ.
ನಂಜನಗೂಡಿನಿಂದ ಮಡಹಳ್ಳಿ ಹಾಗೂ ತಗಡೂರು ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯೆ ಚುಂಚನಹಳ್ಳಿ ಬಳಿ ಇರುವ ಕಕ್ಕರಹಟ್ಟಿ ರೈತ ಸೋಮೇಶ್ ಇಂತಹ ಐನಾತಿ ಐಡಿಯಾ ಹುಡುಕಿ ಚರ್ಚೆಗೆ ಗ್ರಾಸವಾಗಿರುವ ವ್ಯಕ್ತಿ.
ತನ್ನ ನಾಲ್ಕು ಎಕರೆ ಜಮೀನಿನಲ್ಲಿ ಬಾಳೆ ಬೆಳೆಯನ್ನು ಸೊಗಸಾಗಿ ಬೆಳೆದಿದ್ದಾನೆ. ಬಾಳೆ ಬೆಳೆ ಮೇಲೆ ಸಾರ್ವಜನಿಕರು ಮತ್ತು ದಾರಿಹೋಕರ ದೃಷ್ಟಿ ಬೀಳಬಾರದು ಎಂಬ ಕಾರಣಕ್ಕೆ ದೃಷ್ಟಿ ಬೊಂಬೆಗಳನ್ನ ಅಳವಡಿಸುವ ಬದಲು ಮಾಡೆಲ್ ಗಳ ಅರೆಬೆತ್ತಲೆ ಫೋಟೋಗಳನ್ನ ಅಳವಡಿಸಿದ್ದಾನೆ.


ತನ್ನ ಜಮೀನಿನ ಸುತ್ತ ಸುಮಾರು ಹತ್ತಾರು ಕಡೆ ಲೇಡಿ ಮಾಡೆಲ್ ಅರೆಬೆತ್ತಲೆ ಚಿತ್ರಗಳು ರಾರಾಜಿಸುತ್ತಿವೆ.
ದಾರಿಹೋಕರಂತೂ ಸೊಗಸಾಗಿ ಸಮೃದ್ದಿಯಾಗಿ ಬೆಳೆದ ಬಾಳೆ ಗಿಡಗಳ ಮೇಲೆ ದೃಷ್ಟಿ ಹರಿಸದೆ ಮಾಡೆಲ್ ಚಿತ್ರಗಳನ್ನಷ್ಟೇ ಕಣ್ತುಂಬಿಕೊಂಡು ಸಾಗುತ್ತಿದ್ದಾರಂತೆ.
ರೈತ ಸೋಮೇಶ್ ನ ಐನಾತಿ ಐಡಿಯಾ ಕೆಲವು ಗ್ರಾಮಸ್ಥರನ್ನ ಕೆರಳಿಸಿದ್ರೆ ಪಡ್ಡೆ ಹುಡುಗರ ನಿದ್ದೆ ಗೆಡಿಸಿರುವುದಂತೂ ನಿಜ.
ಒಟ್ಟಾರೆ ಸೋಮೇಶ್ ರವರ ಐಡಿಯಾನ ಹೊಗಳಬೇಕೋ…ತೆಗಳಬೇಕೋ…? ಎಂಬುದು ಗ್ರಾಮಸ್ಥರು ಮತ್ತು ಸಾರ್ವಜನಿಕರ ನಿರ್ಧಾರಕ್ಕೆ ಬಿಟ್ಟಿದ್ದು…!

ಇತ್ತೀಚಿನ ಸುದ್ದಿ

ಜಾಹೀರಾತು