ಇತ್ತೀಚಿನ ಸುದ್ದಿ
ಕಿಮ್ಸ್ ಯು.ಜಿ.ಮೆಡಿಕ್ವಿಜ್ ; ಕೆಎಂಸಿ ಮಣಿಪಾಲ ಕಾಲೇಜ್ಗೆ ಪ್ರಶಸ್ತಿ
08/10/2024, 13:32

ಮಂಗಳೂರು(Reporterkarnataka.com) :
ವೈದ್ಯಕೀಯ ಶಿಕ್ಷಣ ವಿದ್ಯಾರ್ಥಿಗಳು ವಿವಿಧ. ನಿಯತಕಾಲಿಕ ಶೈಕ್ಷಣಿಕ ಸ್ಪರ್ಧಾಕೂಟದಲ್ಲಿ ಪಾಲ್ಗೊಂಡು ತಮ್ಮ ಜ್ಞಾನವನ್ನು ವೃದ್ಧಿಸಿದರೆ ಭವಿಷ್ಯದ ವೃತ್ತಿ ಜೀವನದಲ್ಲಿ ಯಶಸ್ಸು ಸಾಧಿಸಬಹುದು. ಶೈಕ್ಷಣಿಕ ಸ್ಪರ್ಧಾಕೂಟದಲ್ಲಿ ಭಾಗವಹಿಸಲು ಪ್ರಥಮ ಆದ್ಯತೆ ಮತ್ತು ಗುರಿಯಿಟ್ಟುಕೊಂಡು ಸೋಲು ಗೆಲವು ದ್ವಿತೀಯ ಉದ್ದೇಶವಾಗಿರಬೇಕು ಎಂದು ಕಣಚೂರು ವೈದ್ಯಕೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಹಾಜಿ ಯು.ಕೆ. ಮೋನು ಸಲಹೆ ನೀಡಿದರು.
ಅವರು ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ವೈದ್ಯಕೀಯ ಶಾಸ್ತ್ರ ವಿಭಾಗದ ಪದವಿ ವೈದ್ಯಕೀಯ ಶಿಕ್ಷಣ ವಿದ್ಯಾರ್ಥಿಗಳಿಗಾಗಿ ನಡೆದ 4ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ರಸ ಪ್ರಶ್ನೆ ಸ್ಪರ್ಧಾಕೂಟ ಕಿಮ್ಸ್ ಯು.ಜಿ.ಮೆಡಿಕ್ವಿಜ್ 2024 ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಈ ಸ್ಪರ್ಧಾ ಕೂಟದಲ್ಲಿ ಮಣಿಪಾಲ ವೈದ್ಯಕೀಯ ಕಾಲೇಜನ್ನು ಪ್ರತಿನಿಧಿಸಿದ ರಾಘವ ಮತ್ತು ಅನಿರುಧ್ ರಾವ್ ಜೋಡಿ ಪ್ರಥಮ ಸ್ಥಾನ ಗಳಿಸಿ ಪ್ರತಿಷ್ಠಿತ ಕಿಮ್ಸ್ ಯು.ಜಿ.ಮೆಡಿಕ್ವಿಜ್ 2024 ಪ್ರಶಸ್ತಿ ಪಡೆಯಿತು. ಕೆ.ಎಂ.ಸಿ. ಮಣಿಪಾಲ ಕಾಲೇಜನ್ನು ಪ್ರತಿನಿಧಿಸಿದ ಸಿದ್ದಾರ್ಥನಂದ ಮತ್ತು ಆದರ್ಶ ಜೋಡಿ ದ್ವಿತೀಯ ಸ್ಥಾನ ಗಳಿಸಿತು.
ವೇದಿಕೆಯಲ್ಲಿ ಪ್ರಾಂಶುಪಾಲ ಡಾ.ಶಹನವಾಜ್ ಮಣಿಪ್ಪಾಡಿ, ಮುಖ್ಯ ಆಡಳಿತಾಧಿಕಾರಿ ಡಾ.ರೋಹನ್ ಮೋನಿಸ್. ಕಣಚೂರು ವೈದ್ಯಕೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಡಾ.ಮೊಹಮ್ಮದ್ ಇಸ್ಮಾಯಿಲ್ ಮತ್ತು ಸದಸ್ಯರಾದ ಡಾ.ಎಂ.ವಿ.ಪ್ರಭು ಉಪಸ್ಥಿತರಿದ್ದರು. ಡಾ.ದೇವದಾಸ್ ರೈ ಸ್ವಾಗತಿಸಿದರು. ಡಾ.ಸನಿನ್ ವಂದಿಸಿದರು. ಡಾ. ಪ್ರೀತಮ್ ಸ್ಪರ್ಧಾಕೂಟವನ್ನು ಸಂಘಟಿಸಿದ್ದರು. ಎಂ.ವಿ. ಮಲ್ಯ ಬಹುಮಾನಗಳನ್ನು ಪ್ರಾಯೋಜಿಸಿದ್ದರು.
ವೈದ್ಯಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ.ಡಾ. ದೇವದಾಸ್ ರೈ ರವರು ಸ್ಪರ್ಧಾಕೂಟವನ್ನು ನಿರೂಪಿಸಿದರು. ಅವಿಭಾಜಿತ ದ.ಕ. ಜಿಲ್ಲೆಯ ವಿವಿಧ ವೈದ್ಯಕೀಯ ಶಿಕ್ಷಣ ಕಾಲೇಜಿನ 60 ತಂಡಗಳು ನಿರ್ಣಾಯಕ ಮತ್ತು ಅಂತಿಮ ಸುತ್ತಿಗೆ ಪ್ರವೇಶ ಪಡೆದಿದ್ದವು.