6:38 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ

ಇತ್ತೀಚಿನ ಸುದ್ದಿ

ಕಿನ್ನರಿ ಕಿಂಡರ್‌ಗಾರ್ಟನ್ ಮಕ್ಕಳ ಜತೆ ವಾಯ್ಸ್ ಆಫ್ ಆರಾಧನಾ ನಿರ್ದೇಶಕಿ ಪದ್ಮಶ್ರೀ ಹುಟ್ಟುಹಬ್ಬ

30/09/2022, 11:46

ಮಂಗಳೂರು(reporterkarnataka.com): ವಾಯ್ಸ್ ಆಫ್ ಆರಾಧನಾದ ನಿರ್ದೇಶಕಿ ಹಾಗೂ ಆರದಿರಲಿ ಬದುಕು ಆರಾಧನಾ ತಂಡದ ಪ್ರವರ್ತಕಿ ಪದ್ಮಶ್ರೀ ನಿಡ್ಡೋಡಿ ಅವರ ಹುಟ್ಟುಹಬ್ಬ ನಗರದ ದೇರೆಬೈಲ್ ಕೊಂಚಾಡಿಯ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ನ ಕಿನ್ನರಿ ಕಿಂಡರ್‌ಗಾರ್ಟನ್ ನ ಮಕ್ಕಳ ಜತೆ ಆಚರಿಸಲಾಯಿತು. ಕಿಂಡರ್‌ಗಾರ್ಟನ್ ನ ಸಹಾಯಕ ಶಿಕ್ಷಕಿ ಸುಜಾತಾ ಅವರಿಗೆ ಈ ಸಂದರ್ಭದಲ್ಲಿ ಜಿನಸಿ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಲಾಯಿತು.


ಹುಟ್ಟುಹಬ್ಬದ ಅಂಗವಾಗಿ ವಾಯ್ಸ್ ಆಫ್ ಆರಾಧನಾ ತಂಡದ ಪ್ರತಿಭೆಗಳಿಂದ ಸಂಗೀತ ರಸಮಂಜರಿ ನಡೆಯಿತು. ಗಣಪತಿ ಸ್ತುತಿಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. p
ಕಿನ್ನರಿ ಕಿಂಡರ್‌ಗಾರ್ಟನ್ ಪರವಾಗಿ ಮೊದಲು ಪದ್ಮಶ್ರೀ ಅವರ ಹುಟ್ಟುಹಬ್ಬದ ಕೇಕ್ ಕಟ್ ಮಾಡಲಾಯಿತು. ಕಿಂಡರ್‌ಗಾರ್ಟನ್ ನಿರ್ದೇಶಕಿ ಲತಾ ಎ. ಕಲ್ಲಡ್ಕ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ವಾಯ್ಸ್ ಆಫ್ ಆರಾಧನಾ00l ತಂಡದಿಂದ ಕೇಕ್ ಕಟ್ ಮಾಡಲಾಯಿತು.

ಬಾಲ ಪ್ರತಿಭೆಗಳಾದ ಅಶ್ಮಿತ್ ಎ.ಜೆ., ಅನನ್ಯ ನಾರಾಯಣ. ಯಶಸ್ ಭಟ್ ಮೊದಲಾದವರಿಂದ ಸಂಗೀತ ಸುಧೆ ಹರಿಯಿತು. ವಾಯ್ಸ್ ಆಫ್ ಆರಾಧನಾ ತಂಡದ ಅಭಿಷೇಕ್ ಶೆಟ್ಟಿ ಐಕಳ, ದೀನ್ ರಾಜ್,  ಕೆ. ದೇವಿಪ್ರಸಾದ್, ಬಸವರಾಜ್ ಮಂತ್ರಿ, ಜಯರಾಮ್,  ಜ್ಯೋತ್ಸ್ನಾ, ಆಶಾ, ಪ್ರಸಾದ್, ಕಿನ್ನರಿ ಕಿಂಡರ್‌ಗಾರ್ಟನ್ ನಿರ್ದೇಶಕಿ ಲತಾ ಎ. ಕಲ್ಲಡ್ಕ ಮುಂತಾದವರು ಉಪಸ್ಥಿತರಿದ್ದರು. ಜ್ಯೋತ್ಸ್ನಾ ಕಾರ್ಯಕ್ರಮ ನಿರೂಪಿದರು.

ಇತ್ತೀಚಿನ ಸುದ್ದಿ

ಜಾಹೀರಾತು