9:37 PM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಕೆಐಒಸಿಎಲ್: ಮಂಗಳೂರು 2 ಯೋಜನೆ  ಸೇರಿದಂತೆ ಒಟ್ಟು 4 ಯೋಜನೆಗಳಿಗೆ ಕೇಂದ್ರ ಆಸ್ತು

23/06/2021, 07:59

ಮಂಗಳೂರು(reporterkarnataka news); ಕುದುರೆಮುಖ ಕಬ್ಬಿಣ ಅದಿರು ಕಂಪೆನಿಯ  ಮಂಗಳೂರಿನಲ್ಲಿ ಮಾಡಲುದ್ದೇಶಿಸಿದ ಎರಡು ಯೋಜನೆಗಳು ಸೇರಿದಂತೆ ಒಟ್ಟು ನಾಲ್ಕು ವಿವಿಧ ಯೋಜನೆಗಳಿಗೆ ಕೇಂದ್ರ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ.

ಕೇಂದ್ರ ಪೆಟ್ರೋಲಿಯಂ ಹಾಗೂ ಉಕ್ಕು ಸಚಿವ ಧರ್ಮೇಂದ್ರ ಪ್ರಧಾನ್  ಅವರು ವರ್ಚುವಲ್ ಸಭೆಯಲ್ಲಿ ಈ ವಿಷಯ ತಿಳಿಸಿದರು.

ಕುದುರೆಮುಖ ಕಬ್ಬಿಣ ಅದಿರು ಕಂಪೆನಿಯು ತನ್ನ ಸಿ.ಎಸ್.ಆರ್. ವತಿಯಿಂದ  ಮೂಡಬಿದಿರೆಯ ಸರ್ಕಾರಿ ಆಸ್ಪತ್ರೆಗೆ  50 ಹಾಸಿಗೆಗಳನ್ನು ಒಟ್ಟು ರೂ. 18.00 ಲಕ್ಷ ವೆಚ್ಚದಲ್ಲಿ ನೀಡುವ ಕಾರ್ಯಕ್ರಮ ಹಾಗೂ ಮಂಗಳೂರಿನ ಕೆ.ಐ.ಒ.ಸಿ.ಎಲ್ ಪೆಲೆಟ್ ಪ್ಲಾಂಟ್ ನ ಆಧುನೀಕರಣದ ಅಂಗವಾಗಿ   ಸುಮಾರು 17.50 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಬ್ಯಾರೆಲ್ ಟೈಪ್ ಬ್ಲೆಂಡರ್ ರೆಕ್ಲೈಮರ್ (Barrel Type Blender Reclaimer) ನ್ನು ಕೇಂದ್ರ ಸಚಿವರು ಉದ್ಘಾಟಿಸಿದರು. 

ಕೋವಿಡ್ 19 ವೈರಾಣು ರೋಗದ ವಿರುದ್ದ ಹೋರಾಡುವ ನಿಟ್ಟಿನಲ್ಲಿ ಕುದುರೆಮುಖ ಕಂಪೆನಿಯು ತನ್ನ ಸಿ.ಎಸ್.ಆರ್. ವತಿಯಿಂದ ಈಗಾಗಲೇ ಜಿಲ್ಲಾಡಳಿತಕ್ಕೆ ಅಂಬುಲೆನ್ಸ್, ವೆಂಟಿಲೇಟರ್ ಸೇರಿದಂತೆ ಉಪ್ಪಿನಂಗಡಿ ಹಾಗೂ ಮೂಡಬಿದಿರೆಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ 250LPM (ಲೀಟರ್ ಪರ್ ಮಿನಿಟ್) ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಘಟಕವನ್ನು ನೀಡುತ್ತಿರುವುದಕ್ಕಾಗಿ ಕೇಂದ್ರ ಪೆಟ್ರೋಲಿಯಂ ಹಾಗೂ ಉಕ್ಕು ಖಾತೆಯ ಸಚಿವರ

ಧರ್ಮೇಂದ್ರ ಪ್ರಧಾನ್ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.ಸಂಸದ ನಳಿನ್ ಕುಮಾರ್ ಕಟೀಲ್, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಮಹಾ ಸ್ವಾಮೀಜಿ, ಉಪಮುಖ್ಯಮಂತ್ರಿ ಡಾ. ಸಿ.ಎನ್. ಆಶ್ವಥ ನಾರಾಯಣ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು