10:11 AM Sunday17 - May 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ…

ಇತ್ತೀಚಿನ ಸುದ್ದಿ

ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ: ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಗೆ ಆಹ್ವಾನ

04/08/2021, 09:20

ಮಂಗಳೂರು (reporterkarnataka.com): ಆತ್ಮನಿರ್ಭರ ಭಾರತ ಅಭಿಯಾನದ ಭಾಗವಾಗಿರುವ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಸಂಪನ್ಮೂಲ ವ್ಯಕ್ತಿಗಳಿಗೆ ಯಾವುದೇ ವೇತನ ಪಾವತಿಸುವುದಿಲ್ಲ, ಆದರೆ ಸಂಪನ್ಮೂಲ ವ್ಯಕ್ತಿಗಳಿಗೆ ನೀಡಲಾಗುವ ಹಣ ಪಾವತಿಯನ್ನು ಅವರು ಬೆಂಬಲಿಸಿರುವಂತಹ ಪ್ರತಿ ಫಲಾನುಭವಿಯನ್ನು ಆಧರಿಸಿ ಬ್ಯಾಂಕ್‍ನಿಂದ ಸಾಲ ಮಂಜೂರಾತಿ ಆದ ನಂತರ ಬ್ಯಾಂಕ್‍ನಿಂದ ಮಂಜೂರಾದ ಪ್ರತಿ ಸಾಲವನ್ನು ಆಧರಿಸಿ 20 ಸಾವಿರ ರೂ. ಗಳನ್ನು 2 ಕಂತುಗಳಲ್ಲಿ ಪಾವತಿಸಲಾಗುತ್ತದೆ.
ಈ ಪೈಕಿ ಶೇ.50 ಮೊತ್ತವನ್ನು ಬ್ಯಾಂಕಿನಿಂದ ಸಾಲ ಮಂಜೂರಾದ ನಂತರ ಹಾಗೂ ಉಳಿದ 50% ಹಣವನ್ನು ಘಟಕಗಳು ಜಿಎಸ್‍ಟಿ ಮತ್ತು ಉದ್ಯೋಗ ಆಧಾರ್ ನೋಂದಣಿಗಳನ್ನು ಪಡೆದ ನಂತರ ಎಫ್.ಎಸ್.ಎಸ್.ಎ.ಐ. ವತಿಯಿಂದ ಪ್ರಮಾಣಿತ ಅನುಸರಣೆಯನ್ನು ಪಡೆದ ನಂತರ ನೀಡಲಾಗುತ್ತದೆ.
ಅರ್ಹತೆಗಳಿವು: ಆಹಾರ ತಂತ್ರಜ್ಞಾನ ಆಹಾರ ಇಂಜಿನಿಯರಿಂಗ್‍ನಲ್ಲಿ ಡಿಪ್ಲಮೊ ಅಥವಾ ಪದವಿ ಪ್ರತಿಷ್ಠಿತ ರಾಷ್ಟ್ರ ಅಥವಾ ಅಂತರರಾಷ್ಟ್ರೀಯ ವಿಶ್ವವಿದ್ಯಾಲಯ ಸಂಸ್ಥೆಗಳಿಂದ, ಆಹಾರ ಸಂಸ್ಕರಣಾ ಕೈಗಾರಿಕೆಗಳಿಗೆ ತಂತ್ರಜ್ಞಾನ ಉನ್ನತೀಕರಣ, ಹೊಸ ಉತ್ಪನ್ನ ಅಭಿವೃದ್ಧಿ, ಗುಣಮಟ್ಟದ ಖಾತ್ರಿ, ಆಹಾರ ಭದ್ರತಾ ನಿರ್ವಹಣೆಗಾಗಿ ಸಲಹಾ ಸೇವೆಗಳನ್ನು ಒದಗಿಸಿದ 3 ರಿಂದ 5 ವರ್ಷ ಅನುಭವವಿರಬೇಕು, ಆಹಾರ ಸಂಸ್ಕರಣೆ, ಕೈಗಾರಿಕೆ, ಬ್ಯಾಂಕಿಂಗ್, ಡಿಪಿಆರ್ ಸಿದ್ಧಪಡಿಸುವಿಕೆ ಹಾಗೂ ತರಬೇತಿಯಲ್ಲಿ ಅನುಭವವುಳ್ಳ ವ್ಯಕ್ತಿಯನ್ನು ಪರಿಗಣಿಸಲಾಗುವುದು, ಕೃಷಿ ಮತ್ತು ಸಂಬಂಧಿತ ವಿಷಯಗಳಲ್ಲಿ ಪದವಿ ಪಡೆದಿರಬೇಕು, ಬ್ಯಾಂಕಿಂಗ್ ವಲಯದಲ್ಲಿ ಕೆಲಸದ ಅನುಭವವಿರಬೇಕು.

ಅರ್ಜಿ ಸಲ್ಲಿಸಲು ಆಗಸ್ಟ್ 7 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2423604 ಅಥವಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು